Featured

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ವಿಫಲ: ಅಧಿಕಾರಿಗಳ ವಿರುದ್ಧ CM ಗರಂ – vishwanews24

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ವಿಫಲ: ಅಧಿಕಾರಿಗಳ ವಿರುದ್ಧ CM ಗರಂ

ಬೆಂಗಳೂರು: ರಾಜ್ಯ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮಂಡಲಗೊಂಡಿದ್ದು, ಸಮರ್ಪಕ ಉತ್ತರ ಒದಗಿಸದ ಕೆಲವು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಇಲಾಖೆಗಳು ಸಮರ್ಪಕವಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ಉಂಟಾದ ಗಂಭೀರ ಪರಿಸ್ಥಿತಿಗೆ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮುಖ್ಯ ಕಾರ್ಯದರ್ಶಿಗೆ ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಲು ಮತ್ತು ಅಗತ್ಯವಿದ್ದರೆ ಅಮಾನತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಇದನ್ನೂ ಓದಿ:

ವಿಧಾನಸಭೆ ಸ್ಪೀಕರ್ ಯುಟಿ.ಖಾದರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇದಕ್ಕೂ ಮುನ್ನ, ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಕೋಪಗೊಂಡ ಸಭಾಧ್ಯಕ್ಷರು ಸದನವನ್ನು ಮುಂದೂಡಿ ಹೊರನಡೆದಿದ್ದರು. ಸಚಿವರು ಮತ್ತು ಅಧಿಕಾರಿಗಳು ಸ್ಪಷ್ಟನೆ ನೀಡುವವರೆಗೆ ಸದನವನ್ನು ನಡೆಸುವುದಿಲ್ಲ ಎಂದು ಘೋಷಿಸಿದ್ದರು.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ ಅವರು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

12 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

13 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

14 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

15 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

15 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

15 hours ago