ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಪಯಣ : ಸಂಜಯ್ ರಾವತ್ – Vishwanews24
ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಪಯಣ : ಸರ್ಕಾರ ಪತನದ ಸುಳಿವು ನೀಡಿದ ಸಂಜಯ್ ರಾವತ್ !
ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವಂತೆಯೇ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಗೊಳ್ಳುವ ಸುಳಿವನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬುಧವಾರ ನೀಡಿದ್ದಾರೆ.
‘ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಪಯಣ’ ಎಂದು ಮರಾಠಿಯಲ್ಲಿ ಒಂದೇ ಸಾಲಿನಲ್ಲಿ ಟ್ವೀಟ್ ಮಾಡಿದ್ದಾರೆ.
महाराष्ट्रातील राजकीय घडामोडींचा प्रवास विधान सभा बरखास्तीचया दिशेने..
— Sanjay Raut (@rautsanjay61) June 22, 2022
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಂಜಯ್ ರಾವತ್ ಅವರು, ಪ್ರಸ್ತುತದ ಮಹಾರಾಷ್ಟ್ರ ರಾಜ್ಯದ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರೀ ಭಯಾನಕ ಭೂಕಂಪ: ಸಾವಿನ ಸಂಖ್ಯೆ 280 ಕ್ಕೆ ಏರಿಕೆ – Vishwanews24
