ಬೆಂಗಳೂರು: ಕರ್ನಾಟಕ 15ನೇ ವಿಧಾನಸಭೆಯ 9ನೇ ಅಧಿವೇಶನ ಗುರುವಾರ ಆರಂಭವಾಗಿದೆ. ‘ಒಂದು ದೇಶ ಒಂದು ಚುನಾವಣೆ’ ಚರ್ಚೆ ಆರಂಭವಾಗಿದ್ದು, ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದ್ದಾರೆ.
ಚರ್ಚೆಗೆ ಒಪ್ಪಿಕೊಂಡು ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಾದ ಕ್ರಮ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದರು.
‘ಒಂದು ದೇಶ ಒಂದು ಚುನಾವಣೆ ಯೋಚನೆಯೇ ಅವಾಸ್ತವಿಕ’ ಎಂದು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ನ ಘೋಷಣೆಯ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದರು.
ಪ್ರಸ್ತಾಪ ವಿರೋಧಿಸಿ ಕಾಂಗ್ರೆಸ್ ಧರಣಿ ಮುಂದುವರಿದಿದ್ದರಿಂದ ಕಲಾಪವನ್ನು ಸಭಾಧ್ಯಕ್ಷ ಕಾಗೇರಿ 15 ನಿಮಿಷ ಮುಂದೂಡಿದರು.
ಒಂದು ದೇಶ, ಒಂದು ಚುನಾವಣೆ : ವಿರೋಧ ವ್ಯಕ್ತಪಡಿಸಿದ ಡಿ.ಕೆ. ಶಿ -Vishwanews24
ಅಧಿವೇಶನದ ಅಂಗವಾಗಿ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ನಡೆದಿತ್ತು.
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಂಪನಿ ಸ್ಥಾಪನೆ, ಆಯುಷ್ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…