ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅನುಮೋದಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದರು.
ನೂತನ ಸ್ಪೀಕರ್ ಖಾದರ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…