ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರೋದ್ರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಸಿಎಂ ಅವರು ಮಾಜಿ ಸಿಎಂ ಎಸ್ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಈ ಮೂವರಿಗೆ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ ಪ್ರಶಸ್ತಿ ಸ್ವೀಕರಿಸಿದರು. ಇತ್ತ ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…