ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರೋದ್ರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಸಿಎಂ ಅವರು ಮಾಜಿ ಸಿಎಂ ಎಸ್ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಈ ಮೂವರಿಗೆ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ ಪ್ರಶಸ್ತಿ ಸ್ವೀಕರಿಸಿದರು. ಇತ್ತ ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…