ಬೆಂಗಳೂರು : ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ಇಂದು ಬೆಳಗ್ಗೆ ಯಡಿಯೂರಪ್ಪ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿರದ್ದನ್ನು ಕಂಡು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ..
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ಕೊಡುತ್ತಾರೆ ಎಂದಿದ್ದರೇ ಸರಿಯಾದ ಸಮಯಕ್ಕೆ ಸ್ವೀಕೃತಿ ಮತ್ತು ರವಾನೆ ಶಾಖೆಯ ಸಿಬ್ಬಂದಿಗಳು ಹಾಜರಾಗ್ತಾ ಇದ್ದರೇನೋ. ಆದರೇ ಇಂದು ಬೆಳಿಗ್ಗೆ ಸರ್ಕಾರಿ ಕಚೇರಿಯ ಸಮಯಕ್ಕೆ ವಿಧಾನಸೌಧದಲ್ಲಿದ್ದ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ, ಸಿಬ್ಬಂದಿಗಳು ಟೈಂ ಆಗಿದ್ದರೂ ಬಾರದೇ ಇದ್ದದ್ದನ್ನು ಕಂಡು ಕೆಂಡಾಮಂಡಲರಾದರು.
ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿಯೇ ಕೆಲವೊತ್ತು ಕುಳಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಖೆಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ಸಮಯ ಮೀರಿ ಬಂದಿದ್ದನ್ನು ಗಮನಿಸಿ, ಸ್ಥಳದಲ್ಲಿದ್ದ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಮಯ ಎಷ್ಟು ಆಗಿದೆ ನೋಡಿ.. ಎಲ್ಲಿ ನಿಮ್ಮ ಶಾಖೆಯ ಸಿಬ್ಬಂದಿಗಳು ಇನ್ನೂ ಬಂದಿಲ್ಲ.? ಇದೇನಾ ನಿಮ್ಮ ಇಲಾಖೆಯ ಸಿಬ್ಬಂದಿಗಳು ಕೆಲಸ ಮಾಡುವ ಪರಿ ಎಂದು ಕ್ಲಾಸ್ ತಗೊಂಡರು.
ಇನ್ನೂ ಮುಂದುವರೆದು ಸಿಬ್ಬಂದಿಗಳು ಸಮಯಕ್ಕೆ ಬಾರದೇ ಇದ್ದುದ್ದರಿಂದ ಸಿಟ್ಟುಗೊಂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸರಿಯಾದ ಸಮಯಕ್ಕೆ ಸಿಬ್ಬಂದಿಗಳು ಹಾಜರಿರಬೇಕು. ಇಲ್ಲವಾದಲ್ಲಿ ಅಂತಹ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…