ಬೆಂಗಳೂರು : ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ಇಂದು ಬೆಳಗ್ಗೆ ಯಡಿಯೂರಪ್ಪ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿರದ್ದನ್ನು ಕಂಡು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ..
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ಕೊಡುತ್ತಾರೆ ಎಂದಿದ್ದರೇ ಸರಿಯಾದ ಸಮಯಕ್ಕೆ ಸ್ವೀಕೃತಿ ಮತ್ತು ರವಾನೆ ಶಾಖೆಯ ಸಿಬ್ಬಂದಿಗಳು ಹಾಜರಾಗ್ತಾ ಇದ್ದರೇನೋ. ಆದರೇ ಇಂದು ಬೆಳಿಗ್ಗೆ ಸರ್ಕಾರಿ ಕಚೇರಿಯ ಸಮಯಕ್ಕೆ ವಿಧಾನಸೌಧದಲ್ಲಿದ್ದ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ, ಸಿಬ್ಬಂದಿಗಳು ಟೈಂ ಆಗಿದ್ದರೂ ಬಾರದೇ ಇದ್ದದ್ದನ್ನು ಕಂಡು ಕೆಂಡಾಮಂಡಲರಾದರು.
ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿಯೇ ಕೆಲವೊತ್ತು ಕುಳಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಖೆಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ಸಮಯ ಮೀರಿ ಬಂದಿದ್ದನ್ನು ಗಮನಿಸಿ, ಸ್ಥಳದಲ್ಲಿದ್ದ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಮಯ ಎಷ್ಟು ಆಗಿದೆ ನೋಡಿ.. ಎಲ್ಲಿ ನಿಮ್ಮ ಶಾಖೆಯ ಸಿಬ್ಬಂದಿಗಳು ಇನ್ನೂ ಬಂದಿಲ್ಲ.? ಇದೇನಾ ನಿಮ್ಮ ಇಲಾಖೆಯ ಸಿಬ್ಬಂದಿಗಳು ಕೆಲಸ ಮಾಡುವ ಪರಿ ಎಂದು ಕ್ಲಾಸ್ ತಗೊಂಡರು.
ಇನ್ನೂ ಮುಂದುವರೆದು ಸಿಬ್ಬಂದಿಗಳು ಸಮಯಕ್ಕೆ ಬಾರದೇ ಇದ್ದುದ್ದರಿಂದ ಸಿಟ್ಟುಗೊಂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸರಿಯಾದ ಸಮಯಕ್ಕೆ ಸಿಬ್ಬಂದಿಗಳು ಹಾಜರಿರಬೇಕು. ಇಲ್ಲವಾದಲ್ಲಿ ಅಂತಹ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…