ಬೆಂಗಳೂರು : ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ಇಂದು ಬೆಳಗ್ಗೆ ಯಡಿಯೂರಪ್ಪ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿರದ್ದನ್ನು ಕಂಡು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ..
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ಕೊಡುತ್ತಾರೆ ಎಂದಿದ್ದರೇ ಸರಿಯಾದ ಸಮಯಕ್ಕೆ ಸ್ವೀಕೃತಿ ಮತ್ತು ರವಾನೆ ಶಾಖೆಯ ಸಿಬ್ಬಂದಿಗಳು ಹಾಜರಾಗ್ತಾ ಇದ್ದರೇನೋ. ಆದರೇ ಇಂದು ಬೆಳಿಗ್ಗೆ ಸರ್ಕಾರಿ ಕಚೇರಿಯ ಸಮಯಕ್ಕೆ ವಿಧಾನಸೌಧದಲ್ಲಿದ್ದ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ, ಸಿಬ್ಬಂದಿಗಳು ಟೈಂ ಆಗಿದ್ದರೂ ಬಾರದೇ ಇದ್ದದ್ದನ್ನು ಕಂಡು ಕೆಂಡಾಮಂಡಲರಾದರು.
ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿಯೇ ಕೆಲವೊತ್ತು ಕುಳಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಖೆಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ಸಮಯ ಮೀರಿ ಬಂದಿದ್ದನ್ನು ಗಮನಿಸಿ, ಸ್ಥಳದಲ್ಲಿದ್ದ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಮಯ ಎಷ್ಟು ಆಗಿದೆ ನೋಡಿ.. ಎಲ್ಲಿ ನಿಮ್ಮ ಶಾಖೆಯ ಸಿಬ್ಬಂದಿಗಳು ಇನ್ನೂ ಬಂದಿಲ್ಲ.? ಇದೇನಾ ನಿಮ್ಮ ಇಲಾಖೆಯ ಸಿಬ್ಬಂದಿಗಳು ಕೆಲಸ ಮಾಡುವ ಪರಿ ಎಂದು ಕ್ಲಾಸ್ ತಗೊಂಡರು.
ಇನ್ನೂ ಮುಂದುವರೆದು ಸಿಬ್ಬಂದಿಗಳು ಸಮಯಕ್ಕೆ ಬಾರದೇ ಇದ್ದುದ್ದರಿಂದ ಸಿಟ್ಟುಗೊಂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸರಿಯಾದ ಸಮಯಕ್ಕೆ ಸಿಬ್ಬಂದಿಗಳು ಹಾಜರಿರಬೇಕು. ಇಲ್ಲವಾದಲ್ಲಿ ಅಂತಹ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…