ಬೆಂಗಳೂರು : ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ಇಂದು ಬೆಳಗ್ಗೆ ಯಡಿಯೂರಪ್ಪ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿರದ್ದನ್ನು ಕಂಡು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ..
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ಕೊಡುತ್ತಾರೆ ಎಂದಿದ್ದರೇ ಸರಿಯಾದ ಸಮಯಕ್ಕೆ ಸ್ವೀಕೃತಿ ಮತ್ತು ರವಾನೆ ಶಾಖೆಯ ಸಿಬ್ಬಂದಿಗಳು ಹಾಜರಾಗ್ತಾ ಇದ್ದರೇನೋ. ಆದರೇ ಇಂದು ಬೆಳಿಗ್ಗೆ ಸರ್ಕಾರಿ ಕಚೇರಿಯ ಸಮಯಕ್ಕೆ ವಿಧಾನಸೌಧದಲ್ಲಿದ್ದ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ, ಸಿಬ್ಬಂದಿಗಳು ಟೈಂ ಆಗಿದ್ದರೂ ಬಾರದೇ ಇದ್ದದ್ದನ್ನು ಕಂಡು ಕೆಂಡಾಮಂಡಲರಾದರು.
ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿಯೇ ಕೆಲವೊತ್ತು ಕುಳಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಖೆಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ಸಮಯ ಮೀರಿ ಬಂದಿದ್ದನ್ನು ಗಮನಿಸಿ, ಸ್ಥಳದಲ್ಲಿದ್ದ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಮಯ ಎಷ್ಟು ಆಗಿದೆ ನೋಡಿ.. ಎಲ್ಲಿ ನಿಮ್ಮ ಶಾಖೆಯ ಸಿಬ್ಬಂದಿಗಳು ಇನ್ನೂ ಬಂದಿಲ್ಲ.? ಇದೇನಾ ನಿಮ್ಮ ಇಲಾಖೆಯ ಸಿಬ್ಬಂದಿಗಳು ಕೆಲಸ ಮಾಡುವ ಪರಿ ಎಂದು ಕ್ಲಾಸ್ ತಗೊಂಡರು.
ಇನ್ನೂ ಮುಂದುವರೆದು ಸಿಬ್ಬಂದಿಗಳು ಸಮಯಕ್ಕೆ ಬಾರದೇ ಇದ್ದುದ್ದರಿಂದ ಸಿಟ್ಟುಗೊಂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸರಿಯಾದ ಸಮಯಕ್ಕೆ ಸಿಬ್ಬಂದಿಗಳು ಹಾಜರಿರಬೇಕು. ಇಲ್ಲವಾದಲ್ಲಿ ಅಂತಹ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…