ಉಡುಪಿ: ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ, ಸಮಾಜದಲ್ಲಿ ಜಾತಿ ಮತ ಭೇದವನ್ನು ವಿರೋಧಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಸರ್ವರಿಗೂ ಸಾರ್ವಕಾಲಿಕ ಅದರ್ಶವಾಗಿದೆ.
ಶಿಕ್ಷಣ, ಉದ್ಯೋಗ ಮತ್ತು ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಯ ಆಶಯ ಹೊತ್ತು, ದಮನಿತ ಸಮುದಾಯಗಳ ಧ್ವನಿಯಾಗಿ ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಇಂದಿನ ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿವಿಧ ದಾರ್ಶನಿಕ ಮಹನೀಯರ ಪುತ್ಥಳಿಯ ಜೊತೆ ವಿಧಾನಸೌಧದಲ್ಲಿ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸಿ ಗೌರವ ಸಲ್ಲಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…