ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರ ನಿಷೇಧ ವಿಧೇಯಕ ಮಂಡಿಸಿದರು.

ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕಳೆದ ಬಾರಿ ಈ ಕಾಯ್ದೆಯನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಮತಾಂತರವಾಗಲು ಎಲ್ಲರಿಗೂ ಅವಕಾಶ ಇದೆ. ಆದರೆ ಬಲವಂತವಾಗಿ, ಒತ್ತಡದಿಂದ, ಆಮೀಷದಿಂದ ಆಗಬಾರದು. ಹೀಗಾಗಿ ಮತಾಂತರ ಮಾಡುವ ವೇಳೆ ಸ್ವಹಿಚ್ಚೆಯಿಂದ ಆಗ್ತಿದ್ದೀನಿ ಎಂದು ಘೋಷಿಸಬೇಕು. ಮತಾಂತರ ಮಾಡುವವರು ಸಹ ವ್ಯಕ್ತಿಯ ಇಚ್ಚೆಯಂತೆ ಮತಾಂತರ ಮಾಡುತ್ತಿದ್ದೇವೆ ಎಂದು ಘೋಷಿಸಬೇಕು. ಮತಾಂತರ ಆದವರು ಈ ಹಿಂದಿನ ತಮ್ಮ ಜಾತಿಯ ಎಲ್ಲ ಸೌಲಭ್ಯ ಕಳೆದುಕೊಳ್ಳುತ್ತಾರೆ ಎಂದರು.

ಪುತ್ತೂರು : ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಪ್ರಕರಣ..ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ – Vishwanews24

Leave a Reply