Featured

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ – vishwanews24

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ

ಮಂಗಳೂರು: ಸ್ಥಳೀಯಾಡಳಿತ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ ಉಡುಪಿ ಜಿಲ್ಲೆಯ ಅಭ್ಯರ್ಥಿ ಯನ್ನು ಕಾಂಗ್ರೆಸ್ ಕಣಕ್ಕಿಳಿಸಲಿದೆ. ಈ ಪೈಕಿ ಉಡುಪಿಯ ಮಾಜಿ ಜಿಪಂ ಅಧ್ಯಕ್ಷರಾದ ರಾಜು ಪೂಜಾರಿ ಮತ್ತು ಭುಜಂಗ ಶೆಟ್ಟಿ ಹಾಗೂ ಪಕ್ಷದ ಮುಖಂಡ ಕಾರ್ಕಳದ ಟಿ.ಆರ್.ರಾಜು ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಅವರೊಂದಿಗೆ ಇನ್ನೂ ಮೂವರ ಹೆಸರು ಹೈಕಮಾಂಡ್‌ನ ಮುಂದಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದರು.

ಉಭಯ ಜಿಲ್ಲೆಗಳ ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಪೈಕಿ ಕಾಂಗ್ರೆಸ್‌ಗಿಂತ ಬಿಜೆಪಿಗ ಮತದಾರರ ಸಂಖ್ಯೆ ಅಧಿಕವಿದೆ. ಹಾಗಂತ ಈ ಕ್ಷೇತ್ರವನ್ನು ಸುಲಭದಲ್ಲಿ ಬಿಟ್ಟುಕೊಡುವ ಪ್ರಶ್ನೆಯಿಲ್ಲ. ಗೆಲ್ಲುವ ಅವಕಾಶವನ್ನೂ ಕೈಚೆಲ್ಲುವುದಿಲ್ಲ. ಈಗಾಗಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಚುನಾವಣಾ ತಂತ್ರಗಾರಿಕೆ ನಡೆಸಲಾಗಿದೆ. ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಪ್ರಬಲ ಅಭ್ಯರ್ಥಿಯ ಆಯ್ಕೆಗೆ ಅವರು ಸೂಚನೆ ನೀಡಿದ್ದಾರೆ. ಅದರಂತೆ ಕೆಪಿಸಿಸಿಯ ಇನ್ನೋರ್ವ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಈ ವಾರ ಜಿಲ್ಲೆಗೆ ಅಗಮಿಸಲಿದ್ದಾರೆ. ಈ ಹಿಂದಿನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಗಳು, ಕಾಂಗ್ರೆಸ್ ಶಾಸಕರು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದರು.

ಈ ಚುನಾವಣೆಯು ಮುಂದಿನ ಜಿಪಂ ಮತ್ತು ತಾಪಂ ಚುನಾವಣೆಗೂ ದಿಕ್ಸೂಚಿಯಾಗಲಿದೆ. ಹಾಗಾಗಿ ಕಾಂಗ್ರೆಸ್ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ.2002ರಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಮೂಲಕ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಪ್ರತಾಪಚಂದ್ರ ಶೆಟ್ಟಿ ಮತ್ತು ಬ್ಲೇಸಿಯಸ್ ಡಿಸೋಜ ಗೆದ್ದಿದ್ದರು. ಬ್ಲೇಸಿಯಸ್ ಡಿಸೋಜರ ನಿಧನದ ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿ ದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನು ಮತ್ತು ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಗೆದ್ದಿದ್ದೆವು. ಶ್ರೀನಿವಾಸ ಪೂಜಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕಾರಣ ತೆರವಾದ ಆ ಸ್ಥಾನಕ್ಕೆ ಇದೀಗ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದು ಮಂಜುನಾಥ ಭಂಡಾರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vishwa News 24

Recent Posts

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

6 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

23 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

28 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

35 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago