Featured

ವಿಧಾನ ಪರಿಷತ್ ಉಪ ಚುನಾವಣೆ:  ಕಿಶೋರ್ ಕುಮಾರ್‌ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ – vishwanews24

ವಿಧಾನ ಪರಿಷತ್ ಉಪ ಚುನಾವಣೆ:  ಕಿಶೋರ್ ಕುಮಾರ್‌ ಬೊಟ್ಯಾಡಿಗೆ ಬಿಜೆಪಿ ಟಿಕೆಟ್

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಬೊಟ್ಯಾಡಿ  ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.

ಈ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಕಣ್ಣಿಟ್ಟಿದ್ದರು. ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿಯ ಸತೀಶ್‌ ಕುಂಪಲ ಮುಂತಾದವರು ಟಿಕೆಟ್‌ ಅಕಾಂಕ್ಷಿಗಳಾಗಿದ್ದರು ಆದರೆ ಇದೀಗ ಬಿಜೆಪಿಯು ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್‌ 21ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

5 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

5 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

5 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

5 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

5 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

6 hours ago