ಮಂಗಳೂರು / ಉಡುಪಿ : ಇರುವ ಒಂದು ಸ್ಥಾನಕ್ಕೆ ಐವರು ಬಿಜೆಪಿ ನಾಯಕರಲ್ಲಿ ಟಿಕೆಟ್ ಪೈಪೋಟಿ ಆರಂಭವಾಗಿದೆ. ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾಗಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿದೆ.
ಬಿಜೆಪಿಯಿಂದ ಅಭ್ಯರ್ಥಿ ಯಾರು ಎನ್ನುವ ಕುತೂಹಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನಾಯಕರಿಗೆ ಹೆಚ್ಚಾಗುತ್ತಿದೆ. ಈಗಾಗಲೇ, ಮಾಜಿ ಸಿಎಂ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿಯವರು, ಅವಳಿ ಜಿಲ್ಲೆಯ ನಾಯಕರು/ಶಾಸಕರು/ಕಾರ್ಯಕರ್ತರಿಂದ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ.
ಬಹುತೇಕ ಸೆಪ್ಟಂಬರ್ 29ನೇ ತಾರೀಕಿನೊಳಗೆ ಅಭ್ಯರ್ಥಿ ಆಯ್ಕೆ ಅಂತಿಮ ಆಗಬಹುದು. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಐವರು ಬಿಜೆಪಿ ನಾಯಕರಿದ್ದಾರೆ. ಆದರೆ, ರಾಜ್ಯ ಕಳುಹಿಸುವ ಕೊಡುವ ಶಿಫಾರಸು ಪಟ್ಟಿಯನ್ನು, ಬಿಜೆಪಿ ಹೈಕಮಾಂಡ್ ಬಹುತೇಕ ಪಕ್ಕಕ್ಕೆ ಇಟ್ಟ ಉದಾಹರಣೆಗಳು ಇರುವುದರಿಂದ, ದೆಹಲಿಯ ಆಯ್ಕೆ ಯಾವುದು ಎನ್ನುವ ಭಯವೂ ಆಕಾಂಕ್ಷಿಗಳಲ್ಲಿದೆ.
ನಳಿನ್ ಕುಮಾರ್ ಕಟೀಲ್
ಪ್ರಮೋದ್ ಮಧ್ವರಾಜ್
ಸುರೇಶ್ ಕುಂಪಲ
ಉದಯ್ ಕುಮಾರ್ ಶೆಟ್ಟಿ
ವಿಕಾಸ್ ಪುತ್ತೂರು
ಬಿಜೆಪಿಯಿಂದ 15 ಆಕಾಂಕ್ಷಿಗಳು: ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಮೋದ್ ಮಧ್ವರಾಜ್, ಉದಯಕುಮಾರ್ ಶೆಟ್ಟಿ, ಸತೀಶ್ ಕುಂಪಲ ಸೇರಿದಂತೆ 15 ಮಂದಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಈ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್ಗೆ ಕಳುಹಿಸಿ ಕೊಡಲಾಗಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…