Featured

ವಿಧಾನ ಪರಿಷತ್ ಚುನಾವಣೆ : ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ  : ಎಚ್‌ಡಿ ಕುಮಾರಸ್ವಾಮಿ – Vishwanews24

ವಿಧಾನ ಪರಿಷತ್ ಚುನಾವಣೆ : ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ  : ಎಚ್‌ಡಿ ಕುಮಾರಸ್ವಾಮಿ

ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ..

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ..

ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲನುಭವಿಸಿದರ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಾಟ ನಡೆಸಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆ ಹೇಳಿರುವ ಹಾಗೆ 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ. ಈಗಲೂ ನಾನು ಅದನ್ನೇ ಹೇಳುತ್ತೇನೆ. ಜೊತೆಗೆ ಈ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ದೊಡ್ಡ ಪಕ್ಷಗಳ ಹಣ ಹಂಚಿಕೆ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಆರೋಪಿಸಿದರು.

ಚುನಾವಣೆ ಎಂದರೆ ಸೋಲು-ಗೆಲುವು ಸಹಜ. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಇನ್ನೂ ಮುಂದೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದಿಗೂ ಧೃತಿಗೆಡುವುದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.

ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದರು. ಆದರಿಂದ ಜೆಡಿಎಸ್ ಸೋಲು ಅನುಭವಿಸಿದೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರೇ ನೇರವಾಗಿ ಹಕ್ಕು ಚಲಾಯಿಸುವುದರಿಂದ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದ ಅವರು ಜಯ ಗಳಿಸಿದ ಎಲ್ಲ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

15 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

15 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

15 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

15 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

18 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

19 hours ago