Featured

ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ ಸುರೇಶ್ ನಾಯಕ್ -vishwanews24

ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ :  ಗೂಂಡಾ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ರಾಜ್ಯ ವಿಧಾನ ಪರಿಷತ್ ನಲ್ಲಿ ಗೌರವಾನ್ವಿತ ಉಪ ಸಭಾಪತಿಯವರನ್ನು ಪೀಠದಿಂದ ಎಳೆದಾಡಿದ ಫಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕಾಂಗ್ರೆಸ್ ನಾಯಕರ ವ್ಯಕ್ತಿತ್ವವನ್ನು ಬಿಂಬಿಸುವ ಇಂತಹ ಅನಾಗರಿಕ ಗೂಂಡಾಗಿರಿ ವರ್ತನೆ ಕಾಂಗ್ರೆಸ್ ಅಧಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿಯುತ್ತಿದ್ದ ಕಾಂಗ್ರೆಸ್ ನಾಯಕರು ಸ್ವತಃ ಮೇಲ್ಮನೆ ಉಪ ಸಭಾಪತಿಯ ಸಾಂವಿಧಾನಿಕ ಹುದ್ದೆಗೆ ಅಪಮಾನಗೈದಿದ್ದಾರೆ. ಕಾಂಗ್ರೆಸಿನ ವಿಧಾನ ಪರಿಷತ್ ಸದಸ್ಯರ ಇಂತಹ ಕೀಳು ಮನಸ್ಥಿತಿಯ ಹೇಯ ವರ್ತನೆ ಸಹಿಸಲಸಾಧ್ಯ. ಸರಕಾರ ತಕ್ಷಣ ತಪ್ಪಿತಸ್ಥರ ಮೇಲೆ ಕಾನೂನು ರೀತ್ಯಾ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸದಾ ದೇಶ ವಿರೋಧಿ ನೀತಿ ಮತ್ತು ಅಪಪ್ರಚಾರವನ್ನೇ ಬಂಡವಾಳವನ್ನಾಗಿಸಿರುವ ಕಾಂಗ್ರೆಸ್ ದಿನೇದಿನೇ ದೇಶಾದ್ಯಂತ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವುದು ವಾಸ್ತವ. ದೇಶದ ಮುಂದೆ ರಾಜ್ಯದ ಮಾನ ಹರಾಜು ಹಾಕಿರುವ ಕಾಂಗ್ರೆಸ್ ನ ಗೂಂಡಾಗಿರಿ ವರ್ತನೆಗೆ ರಾಜ್ಯದ ಜನತೆ ಮುಂಬರಲಿರುವ ಗ್ರಾಮ ಪಂಚಾಯತ್ ಸಹಿತ ಎಲ್ಲಾ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಹೇಳಿದ್ದಾರೆ.

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

43 seconds ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

9 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

43 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago