ಉಡುಪಿ : ಗೂಂಡಾ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ರಾಜ್ಯ ವಿಧಾನ ಪರಿಷತ್ ನಲ್ಲಿ ಗೌರವಾನ್ವಿತ ಉಪ ಸಭಾಪತಿಯವರನ್ನು ಪೀಠದಿಂದ ಎಳೆದಾಡಿದ ಫಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕಾಂಗ್ರೆಸ್ ನಾಯಕರ ವ್ಯಕ್ತಿತ್ವವನ್ನು ಬಿಂಬಿಸುವ ಇಂತಹ ಅನಾಗರಿಕ ಗೂಂಡಾಗಿರಿ ವರ್ತನೆ ಕಾಂಗ್ರೆಸ್ ಅಧಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿಯುತ್ತಿದ್ದ ಕಾಂಗ್ರೆಸ್ ನಾಯಕರು ಸ್ವತಃ ಮೇಲ್ಮನೆ ಉಪ ಸಭಾಪತಿಯ ಸಾಂವಿಧಾನಿಕ ಹುದ್ದೆಗೆ ಅಪಮಾನಗೈದಿದ್ದಾರೆ. ಕಾಂಗ್ರೆಸಿನ ವಿಧಾನ ಪರಿಷತ್ ಸದಸ್ಯರ ಇಂತಹ ಕೀಳು ಮನಸ್ಥಿತಿಯ ಹೇಯ ವರ್ತನೆ ಸಹಿಸಲಸಾಧ್ಯ. ಸರಕಾರ ತಕ್ಷಣ ತಪ್ಪಿತಸ್ಥರ ಮೇಲೆ ಕಾನೂನು ರೀತ್ಯಾ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಸದಾ ದೇಶ ವಿರೋಧಿ ನೀತಿ ಮತ್ತು ಅಪಪ್ರಚಾರವನ್ನೇ ಬಂಡವಾಳವನ್ನಾಗಿಸಿರುವ ಕಾಂಗ್ರೆಸ್ ದಿನೇದಿನೇ ದೇಶಾದ್ಯಂತ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವುದು ವಾಸ್ತವ. ದೇಶದ ಮುಂದೆ ರಾಜ್ಯದ ಮಾನ ಹರಾಜು ಹಾಕಿರುವ ಕಾಂಗ್ರೆಸ್ ನ ಗೂಂಡಾಗಿರಿ ವರ್ತನೆಗೆ ರಾಜ್ಯದ ಜನತೆ ಮುಂಬರಲಿರುವ ಗ್ರಾಮ ಪಂಚಾಯತ್ ಸಹಿತ ಎಲ್ಲಾ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಹೇಳಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…