Featured

ವಿಧಾನ ಪರಿಷತ್ ನಲ್ಲಿ ನಡೆದಿರುವ ಎಲ್ಲಾ ಗೊಂದಲಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ : ಕೋಟ ಶ್ರೀನಿವಾಸ ಪೂಜಾರಿ -Vishwanews24

ವಿಧಾನ ಪರಿಷತ್ ನಲ್ಲಿ ನಡೆದಿರುವ ಎಲ್ಲಾ ಗೊಂದಲಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಉಡುಪಿ: ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನವನ್ನು ಕಾಂಗ್ರೇಸಿಕರಣ ಮಾಡಿ, ರಾಜಕಾರಣ ಮಾಡಿದ್ದು, ವಿಧಾನ ಪರಿಷತ್ ನಲ್ಲಿ ನಡೆದಿರುವ ಎಲ್ಲಾ ಗೊಂದಲಕ್ಕೆ  ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಅವರು ಉಡುಪಿಯಲ್ಲಿ ಮಾಧ್ಯಮದವರೊಂದಗೆ ಮಾತನಾಡಿ ಈ ಹಿಂದೆ ಡಿಎಚ್ ಶಂಕರಮೂರ್ತಿ ಅವರು ಸಭಾಪತಿ ಆಗಿದ್ದ ಸಮಯದಲ್ಲೂ ಇಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ಶಂಕರಮೂರ್ತಿಯವರು ಉಪಸಭಾಪತಿ ಅವರಿಗೆ ಪೀಠ ಬಿಟ್ಟುಕೊಟ್ಟು ನಡಾವಳಿ ಅನುಸರಿಸಿದ್ದರು. ಅವಿಶ್ವಾಸ ಗೊತ್ತುವಳಿ ಬಿದ್ದು ಹೋದ ಬಳಿಕ ಮತ್ತೆ ಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಈ ಬಾರಿ ಕಾನೂನನ್ನು ಸಂಪೂರ್ಣ ಗಾಳಿಗೆ ತೂರಿ ರಾಜಕೀಯ ಮಾಡಲಾಯಿತು. ಸಭಾಪತಿ ಅವರನ್ನು ನಿಯಂತ್ರಣ ಮಾಡಲು ಕಾಂಗ್ರೆಸ್ ಮುಂದಾಗದಿದ್ದರೆ ಗೊಂದಲ ಆಗುತ್ತಿರಲಿಲ್ಲ ಎಂದರು.

ರಾಜಧರ್ಮ ಪಾಲಿಸ ಬೇಕಾದ ಕಾಂಗ್ರೆಸ್ ಉಪ ಸಭಾಪತಿಯವರ ಕುತ್ತಿಗೆಗೆ ಕೈ ಹಾಕಿ ಗೊಂದಲ ಸೃಷ್ಟಿಸಿದ್ದು, ನಾವು ರಾಜ್ಯಪಾಲರ ಮೊರೆ ಹೋಗಿದ್ದೇವೆ, ಮತದಾನಕ್ಕೆ ಅವಕಾಶವನ್ನು ಕೋರಿದ್ದೇವೆ. ನೂತನ ಸಭಾಪತಿ ಯಾರು ಆಗಬೇಕು ಅಂತ ಪಕ್ಷ ತೀರ್ಮಾನಿಸುತ್ತದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago