ಉಡುಪಿ: ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನವನ್ನು ಕಾಂಗ್ರೇಸಿಕರಣ ಮಾಡಿ, ರಾಜಕಾರಣ ಮಾಡಿದ್ದು, ವಿಧಾನ ಪರಿಷತ್ ನಲ್ಲಿ ನಡೆದಿರುವ ಎಲ್ಲಾ ಗೊಂದಲಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಉಡುಪಿಯಲ್ಲಿ ಮಾಧ್ಯಮದವರೊಂದಗೆ ಮಾತನಾಡಿ ಈ ಹಿಂದೆ ಡಿಎಚ್ ಶಂಕರಮೂರ್ತಿ ಅವರು ಸಭಾಪತಿ ಆಗಿದ್ದ ಸಮಯದಲ್ಲೂ ಇಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ಶಂಕರಮೂರ್ತಿಯವರು ಉಪಸಭಾಪತಿ ಅವರಿಗೆ ಪೀಠ ಬಿಟ್ಟುಕೊಟ್ಟು ನಡಾವಳಿ ಅನುಸರಿಸಿದ್ದರು. ಅವಿಶ್ವಾಸ ಗೊತ್ತುವಳಿ ಬಿದ್ದು ಹೋದ ಬಳಿಕ ಮತ್ತೆ ಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಈ ಬಾರಿ ಕಾನೂನನ್ನು ಸಂಪೂರ್ಣ ಗಾಳಿಗೆ ತೂರಿ ರಾಜಕೀಯ ಮಾಡಲಾಯಿತು. ಸಭಾಪತಿ ಅವರನ್ನು ನಿಯಂತ್ರಣ ಮಾಡಲು ಕಾಂಗ್ರೆಸ್ ಮುಂದಾಗದಿದ್ದರೆ ಗೊಂದಲ ಆಗುತ್ತಿರಲಿಲ್ಲ ಎಂದರು.
ರಾಜಧರ್ಮ ಪಾಲಿಸ ಬೇಕಾದ ಕಾಂಗ್ರೆಸ್ ಉಪ ಸಭಾಪತಿಯವರ ಕುತ್ತಿಗೆಗೆ ಕೈ ಹಾಕಿ ಗೊಂದಲ ಸೃಷ್ಟಿಸಿದ್ದು, ನಾವು ರಾಜ್ಯಪಾಲರ ಮೊರೆ ಹೋಗಿದ್ದೇವೆ, ಮತದಾನಕ್ಕೆ ಅವಕಾಶವನ್ನು ಕೋರಿದ್ದೇವೆ. ನೂತನ ಸಭಾಪತಿ ಯಾರು ಆಗಬೇಕು ಅಂತ ಪಕ್ಷ ತೀರ್ಮಾನಿಸುತ್ತದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…