Featured

ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ – vishwanews24

ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಜೂನ್ 13 ರಂದು ವಿಧಾನಪರಿಷತ್ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ವಿನಯ್ ಕುಮಾರ್ ಸೊರಕೆಯವರಿಗೆ ಅವಕಾಶ ನೀಡಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನ್ಯಾಯವಾದಿ ಮೆಲ್ವಿನ್ ಡಿಸೋಜ ಆಗ್ರಹಿಸಿದ್ದಾರೆ.

ವಿನಯ್ ಕುಮಾರ್ ಸೊರಕೆಯವರು ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಗೆದ್ದರೂ, ಸೋತರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಉಡುಪಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ನಿಂತವರು. ಅದೇ ರೀತಿಯಲ್ಲಿ ಕಾಪು ಕ್ಷೇತ್ರದಲ್ಲಿ ಶಾಸಕರಾಗಿ ಮತ್ತು ಸಚಿವರಾಗಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಕಾರ್ಯಕರ್ತರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿವೆ.

 

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿದರೂ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರ ಪರ ನಿಂತು ಅವರ ಎಲ್ಲ ಕೆಲಸಕಾರ್ಯ ಮತ್ತು ಕಷ್ಟಗಳಿಗೆ ಜೊತೆಯಾಗಿ ನಿಂತು ಪಕ್ಷ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಬಂದಿರುತ್ತಾರೆ. ಜಿಲ್ಲೆಯ ಪಕ್ಷದ ಎಲ್ಲ ಕೆಲಸ ಕಾರ್ಯಗಳಲ್ಲಿ ಜಿಲ್ಲಾ ಕಾಂಗ್ರೆಸ್ಗೆ ಸದಾ ಬೆನ್ನೆಲುಬಾಗಿ ನಿಂತಿದ್ದಾರೆ. ಹಾಗೂ ಇತ್ತೀಚೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ರಾಜ್ಯಾದ್ಯಾಂತ ಸಂಚರಿಸಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಹಿಂದೆ ಕೂಡಾ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಇಲ್ಲದೇ ಇರುವ ಈ ಸಂದರ್ಭದಲ್ಲಿ ಶ್ರೀ ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದಲ್ಲಿ ಕಾರ್ಯಕರ್ತರಲ್ಲಿ ಹೊಸ ಹುರುಪು ಬರಲಿದೆ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಲು ಶಕ್ತಿ ಬಂದಂತಾಗುತ್ತದೆ. ಆದುದರಿಂದ ನಮ್ಮ ರಾಜ್ಯ ನಾಯಕರು ಇದನ್ನು ಮನಗಂಡು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಸೇವೆಗೆ ಮನ್ನಣೆ ನೀಡಬೇಕೆಂದು ಮೆಲ್ವಿನ್ ಡಿಸೋಜ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago