ವಿನಯ್ ಕುಮಾರ್ ಸೊರಕೆ ಅವರೊಂದಿಗೆ ಪಿಡಿಓ ನಡೆದುಕೊಂಡ ವರ್ತನೆ ಖಂಡನೆ :ಯುವಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ- Vishwanews24

Featured, ಉಡುಪಿ

ಉಡುಪಿ : ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದ್ಮ ಬಾಯಿ ಎಂಬವರ ಮನೆಯನ್ನು ಯಾವುದೇ ನೋಟಿಸ್ ನೀಡದೆ ತೆರವುಗೊಳಿಸಿರುವ ಪಿಡಿಓ ನ ಜನವಿರೋಧಿ ನಡೆಯ ವಿರುದ್ಧ ಇಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರೊಂದಿಗೆ ಪಿಡಿಓ ನಡೆದುಕೊಂಡ ವರ್ತನೆಯನ್ನು ಉಡುಪಿ ಜಿಲ್ಲಾ ಯುವಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಘಟನೆಯನ್ನು ಖಂಡಿಸಿ ಪ್ರತಿಕ್ರಿಯೆ ನೀಡಿರುವ ಉಡುಪಿ ಜಿಲ್ಲಾ ಯುವಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ ಅವರು, ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪಿಡಿಓ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮಹಿಳೆ ಅಕ್ರಮ ಸಕ್ರಮದಲ್ಲಿ ಮನೆ ನಿರ್ಮಿಸಿದ್ದು ಈ ಮನೆಯ ಸಕ್ರಮಕ್ಕೆ ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಮಹಿಳೆಯ ಮನೆಯನ್ನು ದ್ವಂಸ ಗೊಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಮನವಿ ಸಲ್ಲಿಸಲು ಬಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರೊಂದಿಗೆ ನಡೆದುಕೊಂಡ ರೀತಿ ಖಂಡಿಸುವಂತಹದ್ದು ಎಂದಿದ್ದಾರೆ.

Leave a Reply