ಬೆಂಗಳೂರು: ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ ರಿಲೀಸ್ ಮಾಡಲು ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಸಿಎಂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಹಿಂದೆ ಕಾಂಗ್ರೆಸ್ ಶಾಸಕರಿಗೆ ಮಾತ್ರ 50 ಕೋಟಿ ರೂ. ಅನುದಾನ ಸಿಎಂ ರಿಲೀಸ್ ಮಾಡಿದ್ದರು. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಧಿವೇಶನದಲ್ಲಿ ಈ ಬಗ್ಗೆ ವಿಪಕ್ಷಗಳು ವಿರೋಧ ಮಾಡಿದ್ದವು. ಇದೀಗ ವಿಪಕ್ಷಗಳ ಶಾಸಕರಿಗೂ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ.
ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…