Featured

ವಿಪಕ್ಷಗಳು ಒಗ್ಗಟ್ಟಾಗಿ ಬಿಜೆಪಿಯನ್ನು ಸೋಲಿಸುತ್ತೇವೆ, : ಮಮತಾ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಅಧಿಕಾರದ ಕೊನೆಯ ವರ್ಷದಲ್ಲಿ ಇದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಹಿನ್ನೆಲೆಯಲ್ಲೇ ವಿರೋಧ ಪಕ್ಷಗಳು ತಮ್ಮ ತಯಾರಿ ಚಟುವಟಿಕೆಯನ್ನು ತೀವ್ರಗೊಳಿಸಿದೆ. ತೃಣಮೂಲ ಕಾಂಗ್ರೆಸ್​​ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ದೆಹಲಿಯ ಭೇಟಿ ಮಾಡಿದ್ದು, ನಾನು ಪ್ರಧಾನಿ ರೇಸ್​ನಲ್ಲಿಲ್ಲ ಎಂದು ತಿಳಿಸಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಆದರೆ ತಮ್ಮ ಬೆಂಬಲಿ ಇದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅಸ್ಸಾಂ ಎನ್​ಸಿಆರ್​ ಬಿಲ್​ ಸೇರಿದಂತೆ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಕುರಿತು ಚರ್ಚಿಸಿದೆವು. ಕೇಂದ್ರ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದೇ ಚಿಂತೆಯಾಗಿದೆ. ವಿಪಕ್ಷಗಳು ಒಗ್ಗಟ್ಟಾಗಿದ್ದು, ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು. ಸೋನಿಯಾ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, ಕಾಂಗ್ರೆಸ್​ನೊಂದಿಗೆ ಹಲವು ವರ್ಷಗಳಿಂದ ಒಳ್ಳೆಯ ಸಂಬಂಧ ಹೊಂದಿದ್ದೇನೆ. ನಾವು ಮುಂದಿನ ರಾಜಕೀಯ, ಎನ್​ಸಿಆರ್​ ಬಿಲ್​ ಸೇರಿದಂತೆ ಹೇಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎನ್ನುವ ಕುರಿತು ಚರ್ಚಿಸಿದ್ದೇವೆ ಎಂದರು..

ಮಮತಾ ಬ್ಯಾನರ್ಜಿ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ:

ತೃತೀಯ ರಂಗದ ಸಾರಥ್ಯ ಹೊತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾಜಿ ಪ್ರಧಾನಿ ದೇವಗೌಡರನ್ನು ಇಲ್ಲಿನ ಕರ್ನಾಟಕ ಭವನದಲ್ಲಿ ಭೇಟಿಮಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರನ್ನು  ಮಮತಾ ಬ್ಯಾನರ್ಜಿಯವರು ಕರ್ನಾಟಕ ಭವನದಲ್ಲಿ ಭೇಟಿಯಾಗಿ ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಸರ್ಕಾರದ ಎನ್‌ಆರ್‌ಸಿ ಕರಡು ವಿರೋಧಿಸುತ್ತಿರುವ ಮಮತಾ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದು, ಮಮತಾ ಬ್ಯಾನರ್ಜಿಯವರ ಮನವಿಗೆ ಒಪ್ಪಿಕೊಂಡ ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago