Featured

ವಿಪಕ್ಷಗಳ ಅಪಪ್ರಚಾರದಿಂದ ಸೋಲು: ಸೊರಕೆ

ಕುಂದಾಪುರ:  ನಮ್ಮ ಅವಧಿಯಲ್ಲಿ ಆದ ಅಭಿವೃದ್ಧಿ ಈವರೆಗೆ ಆಗಿಲ್ಲ.ಬಿಜೆಪಿ ಭಾವನಾತ್ಮಕವಾಗಿ ಜನರ ಮನಸ್ಸನ್ನು ಗೆದ್ದಿದೆ  ವಿನಃ ಇತರ ವಿಚಾರದಲ್ಲಿ ಅಲ್ಲ  ಎಂದು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದರು.  

ಅವರು ರವಿವಾರ ಇಲ್ಲಿನ ಹರಿಪ್ರಸಾದ್‌ ಹೊಟೇಲ್‌ನ ಅಕ್ಷತಾ ಸಭಾಂಗಣದಲ್ಲಿ  ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಆತ್ಮಾವಲೋಕನ ಸಭೆ 
ವಿಪಕ್ಷಗಳ ಅಪಪ್ರಚಾರದಿಂದಾಗಿ ಸೋಲನ್ನು ಅನುಭವಿಸ ಬೇಕಾಯಿತು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಒತ್ತು ನೀಡಲು ಆತ್ಮಾವ ಲೋಕನ ಸಭೆ ನಡೆಸಲಾಗುತ್ತಿದೆ. ಪ್ರತೀ ರವಿವಾರ ಎರಡು ಬ್ಲಾಕ್‌ಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಸಭೆ ನಡೆಸಲಾಗುವುದು ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ  ಮಾತನಾಡಿ, ಪೈಪ್‌ಲೈನ್‌ ಹಾದು ಹೋಗುವ ಗ್ರಾಮಗಳ ಜನತೆಗೆ ಕಚ್ಛಾ  ನೀರು ಕೊಟ್ಟು ಉಡುಪಿಗೆ ಮಾತ್ರ ಶುದ್ಧ ಕುಡಿಯುವ ನೀರು ಕೊಡುತ್ತೇವೆ ಎನ್ನುವ ವಾರಾಹಿ ಅಮೃತ್‌ ಯೋಜನೆ ಅಮಾನವೀಯ. ಉಡುಪಿಗೆ ನೀರು ಕೊಡುವುದಕ್ಕೆ ವಿರೋಧವಿಲ್ಲ. ಆದರೆ  ಪೈಪ್‌ಲೈನ್‌ಗಾಗಿ ಭೂಸ್ವಾಧೀನ ಮಾಡದೆ 38 ಕಿ.ಮೀ. ರಸ್ತೆಯನ್ನು ಅಗೆದು ಪೈಪ್‌ ಕೊಂಡೊಯ್ಯುತ್ತೇವೆ ಎನ್ನುವುದು ರಾಷ್ಟ್ರ ದ್ರೋಹಕ್ಕೆ ಸಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜನಾರ್ದನ್‌ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಕಾರ್ಕಳ ಮಾಜಿ ಶಾಸಕ ಕೆ. ಗೋಪಾಲ್‌ ಭಂಡಾರಿ, ರಾಜ್ಯ ಇಂಟಕ್‌ ಅಧ್ಯಕ್ಷ ರಾಕೇಶ್‌ ಮಲ್ಲಿ, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಉದಯ್‌ ಕುಮಾರ್‌ ಶೆಟ್ಟಿ ಮುನಿಯಾಲು, ಕೆಪಿಸಿಸಿ ಕಾರ್ಯದರ್ಶಿ ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಸೇವಾದಳ ಅಧ್ಯಕ್ಷ ಅಶೋಕ್‌ ಕುಮಾರ್‌, ಹೆರಿಯಣ್ಣ, ಕಾಂಗ್ರೆಸ್‌ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಮಾಣಿ ಗೋಪಾಲ್‌ ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ  ಮಲ್ಯಾಡಿ ಶಿವರಾಮ ಶೆಟ್ಟಿ ಸ್ವಾಗತಿಸಿ, ನಾರಾಯಣ ಆಚಾರ್ಯ ನಿರ್ವಹಿಸಿ, ವಂದಿಸಿದರು.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

24 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago