ಕುಂದಾಪುರ: ನಮ್ಮ ಅವಧಿಯಲ್ಲಿ ಆದ ಅಭಿವೃದ್ಧಿ ಈವರೆಗೆ ಆಗಿಲ್ಲ.ಬಿಜೆಪಿ ಭಾವನಾತ್ಮಕವಾಗಿ ಜನರ ಮನಸ್ಸನ್ನು ಗೆದ್ದಿದೆ ವಿನಃ ಇತರ ವಿಚಾರದಲ್ಲಿ ಅಲ್ಲ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.
ಅವರು ರವಿವಾರ ಇಲ್ಲಿನ ಹರಿಪ್ರಸಾದ್ ಹೊಟೇಲ್ನ ಅಕ್ಷತಾ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಆತ್ಮಾವಲೋಕನ ಸಭೆ
ವಿಪಕ್ಷಗಳ ಅಪಪ್ರಚಾರದಿಂದಾಗಿ ಸೋಲನ್ನು ಅನುಭವಿಸ ಬೇಕಾಯಿತು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒತ್ತು ನೀಡಲು ಆತ್ಮಾವ ಲೋಕನ ಸಭೆ ನಡೆಸಲಾಗುತ್ತಿದೆ. ಪ್ರತೀ ರವಿವಾರ ಎರಡು ಬ್ಲಾಕ್ಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಸಭೆ ನಡೆಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ಚಂದ್ರ ಶೆಟ್ಟಿ ಮಾತನಾಡಿ, ಪೈಪ್ಲೈನ್ ಹಾದು ಹೋಗುವ ಗ್ರಾಮಗಳ ಜನತೆಗೆ ಕಚ್ಛಾ ನೀರು ಕೊಟ್ಟು ಉಡುಪಿಗೆ ಮಾತ್ರ ಶುದ್ಧ ಕುಡಿಯುವ ನೀರು ಕೊಡುತ್ತೇವೆ ಎನ್ನುವ ವಾರಾಹಿ ಅಮೃತ್ ಯೋಜನೆ ಅಮಾನವೀಯ. ಉಡುಪಿಗೆ ನೀರು ಕೊಡುವುದಕ್ಕೆ ವಿರೋಧವಿಲ್ಲ. ಆದರೆ ಪೈಪ್ಲೈನ್ಗಾಗಿ ಭೂಸ್ವಾಧೀನ ಮಾಡದೆ 38 ಕಿ.ಮೀ. ರಸ್ತೆಯನ್ನು ಅಗೆದು ಪೈಪ್ ಕೊಂಡೊಯ್ಯುತ್ತೇವೆ ಎನ್ನುವುದು ರಾಷ್ಟ್ರ ದ್ರೋಹಕ್ಕೆ ಸಮ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ್ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾರ್ಕಳ ಮಾಜಿ ಶಾಸಕ ಕೆ. ಗೋಪಾಲ್ ಭಂಡಾರಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಕೆಪಿಸಿಸಿ ಕಾರ್ಯದರ್ಶಿ ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಅಶೋಕ್ ಕುಮಾರ್, ಹೆರಿಯಣ್ಣ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಮಾಣಿ ಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಸ್ವಾಗತಿಸಿ, ನಾರಾಯಣ ಆಚಾರ್ಯ ನಿರ್ವಹಿಸಿ, ವಂದಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…