ನವದೆಹಲಿ: ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಇಂದು ಮಧ್ಯಾಹ್ನ ನಂತ್ರ ಶಾಸಕಾಂಗ ಪಕ್ಷದ ಸಭೆ ಕೂಡ ಕರೆಯಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ, ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ ಎಂದಿದ್ದಾರೆ.
ಇಂದು ಈ ವಿಷಯವಾಗಿ ಮೊನ್ನೆ ದೆಹಲಿಗೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸುವುದಕ್ಕೆ ತೆರಳಿದ್ದರು. ನಿನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇವಲ 8 ನಿಮಷಗಳ ಕಾಲ ಚರ್ಚಿಸಿದ್ದರು. ಈ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮಾಜಿ ಸಿಎಂ ಬಿಎಸ್ ವೈ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ನಾನು ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಅಮಿತ್ ಶಾ ನಾಳೆ ತೀರ್ಮಾನ ಮಾಡುತ್ತಾರೆ. ನಾಳೆ ಎಲ್ಲವೂ ತೀರ್ಮಾನ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಈಗಾಗಲೇ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಆಡಳಿತ ಪಕ್ಷದ ಅನೇಕ ನಾಯಕರು ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ನಡೆಯಬೇಕಿದ್ದಂತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಕೂಡ ನಡೆಯಲಿದೆ ಎನ್ನಲಾಗುತ್ತಿದ್ದಂತ ಸಭೆ ನಾಳೆಗೆ ಮುಂದೂಡಿಕೆಯಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…