ನವದೆಹಲಿ: ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಇಂದು ಮಧ್ಯಾಹ್ನ ನಂತ್ರ ಶಾಸಕಾಂಗ ಪಕ್ಷದ ಸಭೆ ಕೂಡ ಕರೆಯಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ, ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ ಎಂದಿದ್ದಾರೆ.
ಇಂದು ಈ ವಿಷಯವಾಗಿ ಮೊನ್ನೆ ದೆಹಲಿಗೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸುವುದಕ್ಕೆ ತೆರಳಿದ್ದರು. ನಿನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇವಲ 8 ನಿಮಷಗಳ ಕಾಲ ಚರ್ಚಿಸಿದ್ದರು. ಈ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮಾಜಿ ಸಿಎಂ ಬಿಎಸ್ ವೈ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ನಾನು ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಅಮಿತ್ ಶಾ ನಾಳೆ ತೀರ್ಮಾನ ಮಾಡುತ್ತಾರೆ. ನಾಳೆ ಎಲ್ಲವೂ ತೀರ್ಮಾನ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಈಗಾಗಲೇ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಆಡಳಿತ ಪಕ್ಷದ ಅನೇಕ ನಾಯಕರು ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ನಡೆಯಬೇಕಿದ್ದಂತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಕೂಡ ನಡೆಯಲಿದೆ ಎನ್ನಲಾಗುತ್ತಿದ್ದಂತ ಸಭೆ ನಾಳೆಗೆ ಮುಂದೂಡಿಕೆಯಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…