Featured

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ – vishwanews24

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ

ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಬುಧವಾರವೂ ಭಾರಿ ವ್ಯತ್ಯಯ ಉಂಟಾಗಿದೆ. ಒಟ್ಟು 142 ಇಂಡಿಗೋ ವಿಮಾನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಆ ಪೈಕಿ ಕೆಲವು ವಿಳಂಬವಾದರೆ ಇನ್ನು ಕೆಲವು ವಿಮಾನಗಳು ರದ್ದಾಗಿವೆ. ಕಳೆದ ತಿಂಗಳಿಂದ ಜಾರಿಯಾಗಿರುವ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ಸ್ ಹಿನ್ನೆಲೆ ಪೈಲಟ್‌ಗಳು ಮತ್ತು ಸಿಬ್ಬಂದಿ ಡ್ಯೂಟಿ‌ಗೆ ಹಾಜರಾಗದಿರುವುದೇ ಹೆಚ್ಚಿನ ವ್ಯತ್ಯಯಗಳಿಗೆ ಕಾರಣ ಎನ್ನಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL)‌ನ ಮೂಲಗಳ ಪ್ರಕಾರ, ಇಂಡಿಗೋ ಸಂಸ್ಥೆಯ ಒಟ್ಟು 42 ವಿಮಾನಗಳು ರದ್ದುಗೊಂಡಿವೆ. ಬೆಂಗಳೂರಿಗೆ ಬರಬೇಕಾಗಿದ್ದ ಒಂದು ವಿಮಾನದ ಮಾರ್ಗ ಬದಲಾಯಿಸಲಾಗಿದೆ. ಇನ್ನು, ಪೈಲಟ್‌ಗಳು ಕರ್ತವ್ಯಕ್ಕೆ ಹಾಜರಾಗದೆ ಇರುವ ಬಗ್ಗೆ ವರದಿಗಳು ಹರಿದಾಡುತ್ತಿದ್ದಂತೆ, ಇಂಡಿಗೋ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಕಳೆದ ಎರಡು ದಿನಗಳಿಂದ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಪ್ರಯಾಣಿಕರಿಗೆ ಉಂಟಾದ ಅಸೌಕರ್ಯಕ್ಕೆ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.

ಅನಿರೀಕ್ಷಿತ ಕಾರ್ಯಾಚರಣಾ ಸವಾಲುಗಳು, ಸಣ್ಣ ತಾಂತ್ರಿಕ ದೋಷ, ಚಳಿಗಾಲದ ವೇಳಾಪಟ್ಟಿ ಬದಲಾವಣೆ, ಹವಾಮಾನ ವೈಪರೀತ್ಯ, ವಿಮಾನಯಾನ ವ್ಯವಸ್ಥೆಯ ಹೆಚ್ಚಿದ ವಾಹನ ದಟ್ಟಣೆ ಮತ್ತು ನವೀಕರಿಸಿದ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ಜಾರಿ ಸೇರಿ ಕೆಲ ವಿಷಯಗಳು ನಮ್ಮ ವಿಮಾನಗಳ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರಿವೆ. ಅರ್ಹ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ ಅಥವಾ ಪರ್ಯಾಯ ವಿಮಾನಗಳನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಏರ್ ಇಂಡಿಯಾ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ
ಮಾಹಿತಿ ಪ್ರಕಾರ, ಬುಧವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್​​ನ 38 ವಿಮಾನಗಳ ಹಾರಾಟದಲ್ಲೂ ವ್ಯತ್ಯಯವಾಗಿದೆ. ವಿಮಾನದಲ್ಲಿ ಕೆಲ ಸಮಸ್ಯೆಗಳನ್ನು ಸಿಬ್ಬಂದಿ ಗಮನಿಸಿದ ಕಾರಣ ಮಂಗಳವಾರ ಮೂರು ವಿಮಾನಗಳು ಒಂದು ಗಂಟೆಗೂ ಹೆಚ್ಚು ತಡವಾಗಿ ಸಂಚರಿಸಿದ್ದವು. ವಿಮಾನಗಳನ್ನು ಗೇಟ್‌ಗೆ ಹಿಂದಕ್ಕೆ ಕರೆಸಿ ನಿರ್ವಹಣಾ ಸಿಬ್ಬಂದಿ ಪರಿಶೀಲನೆ ನಡೆಸಿ, ಬಳಿಕ ಸಂಚಾರಕ್ಕೆ ಅನುಮತಿ ನೀಡಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago