Featured

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ – vishwanews24

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ

ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಬುಧವಾರವೂ ಭಾರಿ ವ್ಯತ್ಯಯ ಉಂಟಾಗಿದೆ. ಒಟ್ಟು 142 ಇಂಡಿಗೋ ವಿಮಾನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಆ ಪೈಕಿ ಕೆಲವು ವಿಳಂಬವಾದರೆ ಇನ್ನು ಕೆಲವು ವಿಮಾನಗಳು ರದ್ದಾಗಿವೆ. ಕಳೆದ ತಿಂಗಳಿಂದ ಜಾರಿಯಾಗಿರುವ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ಸ್ ಹಿನ್ನೆಲೆ ಪೈಲಟ್‌ಗಳು ಮತ್ತು ಸಿಬ್ಬಂದಿ ಡ್ಯೂಟಿ‌ಗೆ ಹಾಜರಾಗದಿರುವುದೇ ಹೆಚ್ಚಿನ ವ್ಯತ್ಯಯಗಳಿಗೆ ಕಾರಣ ಎನ್ನಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL)‌ನ ಮೂಲಗಳ ಪ್ರಕಾರ, ಇಂಡಿಗೋ ಸಂಸ್ಥೆಯ ಒಟ್ಟು 42 ವಿಮಾನಗಳು ರದ್ದುಗೊಂಡಿವೆ. ಬೆಂಗಳೂರಿಗೆ ಬರಬೇಕಾಗಿದ್ದ ಒಂದು ವಿಮಾನದ ಮಾರ್ಗ ಬದಲಾಯಿಸಲಾಗಿದೆ. ಇನ್ನು, ಪೈಲಟ್‌ಗಳು ಕರ್ತವ್ಯಕ್ಕೆ ಹಾಜರಾಗದೆ ಇರುವ ಬಗ್ಗೆ ವರದಿಗಳು ಹರಿದಾಡುತ್ತಿದ್ದಂತೆ, ಇಂಡಿಗೋ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಕಳೆದ ಎರಡು ದಿನಗಳಿಂದ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಪ್ರಯಾಣಿಕರಿಗೆ ಉಂಟಾದ ಅಸೌಕರ್ಯಕ್ಕೆ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.

ಅನಿರೀಕ್ಷಿತ ಕಾರ್ಯಾಚರಣಾ ಸವಾಲುಗಳು, ಸಣ್ಣ ತಾಂತ್ರಿಕ ದೋಷ, ಚಳಿಗಾಲದ ವೇಳಾಪಟ್ಟಿ ಬದಲಾವಣೆ, ಹವಾಮಾನ ವೈಪರೀತ್ಯ, ವಿಮಾನಯಾನ ವ್ಯವಸ್ಥೆಯ ಹೆಚ್ಚಿದ ವಾಹನ ದಟ್ಟಣೆ ಮತ್ತು ನವೀಕರಿಸಿದ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ಜಾರಿ ಸೇರಿ ಕೆಲ ವಿಷಯಗಳು ನಮ್ಮ ವಿಮಾನಗಳ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರಿವೆ. ಅರ್ಹ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ ಅಥವಾ ಪರ್ಯಾಯ ವಿಮಾನಗಳನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಏರ್ ಇಂಡಿಯಾ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ
ಮಾಹಿತಿ ಪ್ರಕಾರ, ಬುಧವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್​​ನ 38 ವಿಮಾನಗಳ ಹಾರಾಟದಲ್ಲೂ ವ್ಯತ್ಯಯವಾಗಿದೆ. ವಿಮಾನದಲ್ಲಿ ಕೆಲ ಸಮಸ್ಯೆಗಳನ್ನು ಸಿಬ್ಬಂದಿ ಗಮನಿಸಿದ ಕಾರಣ ಮಂಗಳವಾರ ಮೂರು ವಿಮಾನಗಳು ಒಂದು ಗಂಟೆಗೂ ಹೆಚ್ಚು ತಡವಾಗಿ ಸಂಚರಿಸಿದ್ದವು. ವಿಮಾನಗಳನ್ನು ಗೇಟ್‌ಗೆ ಹಿಂದಕ್ಕೆ ಕರೆಸಿ ನಿರ್ವಹಣಾ ಸಿಬ್ಬಂದಿ ಪರಿಶೀಲನೆ ನಡೆಸಿ, ಬಳಿಕ ಸಂಚಾರಕ್ಕೆ ಅನುಮತಿ ನೀಡಿದ್ದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago