ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ಶುಭಾಶಯ ಕೋರಿದ್ದಾರೆ.
ಮಂಗಳೂರು: ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸಿದ್ರೆ ಅಲ್ಲಿ ನೀಡುವ ಸೂಚನೆಗಳ ಬಗ್ಗೆ ನಿಮಗೆ ತಿಳಿದೇ ಇರುತ್ತದೆ. ಅಲ್ಲಿ ಒಂದಷ್ಟು ಸಮಾನ್ಯ ವಿಚಾರ ಇರುತ್ತೆ. ವಿಮಾನದಲ್ಲಿನ ಪ್ರಯಾಣ, ನಡವಳಿಕೆಗಳ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ಅಲ್ಲಿ ಹೇಳುತ್ತಾರೆ. ಆದರೆ ಈಗ ಈ ಸೂಚನೆಗಳ ಅನೌನ್ಸ್ಮೆಂಟ್ ತುಳು ಭಾಷಿಕರಲ್ಲಿ ಹೊಸ ಆಸಕ್ತಿ ಮೂಡಿಸಿದೆ. ಅದಕ್ಕೆ ಕಾರಣ ವಿಮಾನದಲ್ಲಿ ಮಾಡಲಾದ ತುಳು ಭಾಷೆಯ ಅನೌನ್ಸ್ಮೆಂಟ್.
ಮಹಾರಾಷ್ಟ್ರದ ಮುಂಬೈ ಇಂಟರ್ ನ್ಯಾಶನಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನದಲ್ಲಿ ತುಳು ಭಾಷೆಯಲ್ಲಿ ಕೂಡ ಸೂಚನೆ ಕೊಡಲಾಗಿದೆ. ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ಶುಭಾಶಯ ಕೋರಿದ್ದಾರೆ.
ವಿಮಾನಗಳಲ್ಲಿ ಇಂತಹ ಸೂಚನೆ ಅಥವಾ ಅನೌನ್ಸ್ಮೆಂಟ್ಗಳನ್ನು ಮಾಡುವ ಸಂದರ್ಭದಲ್ಲಿ ಇಂಗ್ಲೀಷ್ ಭಾಷೆಯನ್ನು ಬಳಸಲಾಗುತ್ತದೆ. ಇನ್ನು ಅಂತರಾಷ್ಟ್ರೀಯ ವಿಮಾನಗಳಲ್ಲಿ ಇಂಗ್ಲೀಷ್ ಭಾಷೆ ಬಳಸಿದರೆ, ಡೊಮೆಸ್ಟಿಕ್ ವಿಮಾನಗಳಲ್ಲಿ ಇಂಗ್ಲೀಷ್ ಜೊತೆ ಹಿಂದಿ ಭಾಷೆಯನ್ನು ಬಳಸುತ್ತಾರೆ. ಆದರೆ ಪ್ರಾದೇಶಿಕ ಭಾಷೆಯನ್ನು ಬಳಸೋದು ವಿರಳವಾಗಿದ್ದು ತುಳು ಭಾಷೆಯನ್ನು ಬಳಸಿದ್ದು ಈಗ ತುಳುವರಿಗೆ ಹೆಮ್ಮ ಪಡುವ ವಿಚಾರವಾಗಿದೆ. ಇನ್ನು ಪೈಲಟ್ ತುಳು ಜೊತೆ ಇಂಗ್ಲೀಷ್ ಭಾಷೆಯಲ್ಲಿ ಕೂಡ ಅನೌನ್ಸ್ಮೆಂಟ್ ಮಾಡಿದ್ದಾರೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…