ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ಶುಭಾಶಯ ಕೋರಿದ್ದಾರೆ.
ಮಂಗಳೂರು: ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸಿದ್ರೆ ಅಲ್ಲಿ ನೀಡುವ ಸೂಚನೆಗಳ ಬಗ್ಗೆ ನಿಮಗೆ ತಿಳಿದೇ ಇರುತ್ತದೆ. ಅಲ್ಲಿ ಒಂದಷ್ಟು ಸಮಾನ್ಯ ವಿಚಾರ ಇರುತ್ತೆ. ವಿಮಾನದಲ್ಲಿನ ಪ್ರಯಾಣ, ನಡವಳಿಕೆಗಳ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ಅಲ್ಲಿ ಹೇಳುತ್ತಾರೆ. ಆದರೆ ಈಗ ಈ ಸೂಚನೆಗಳ ಅನೌನ್ಸ್ಮೆಂಟ್ ತುಳು ಭಾಷಿಕರಲ್ಲಿ ಹೊಸ ಆಸಕ್ತಿ ಮೂಡಿಸಿದೆ. ಅದಕ್ಕೆ ಕಾರಣ ವಿಮಾನದಲ್ಲಿ ಮಾಡಲಾದ ತುಳು ಭಾಷೆಯ ಅನೌನ್ಸ್ಮೆಂಟ್.
ಮಹಾರಾಷ್ಟ್ರದ ಮುಂಬೈ ಇಂಟರ್ ನ್ಯಾಶನಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನದಲ್ಲಿ ತುಳು ಭಾಷೆಯಲ್ಲಿ ಕೂಡ ಸೂಚನೆ ಕೊಡಲಾಗಿದೆ. ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ಶುಭಾಶಯ ಕೋರಿದ್ದಾರೆ.
ವಿಮಾನಗಳಲ್ಲಿ ಇಂತಹ ಸೂಚನೆ ಅಥವಾ ಅನೌನ್ಸ್ಮೆಂಟ್ಗಳನ್ನು ಮಾಡುವ ಸಂದರ್ಭದಲ್ಲಿ ಇಂಗ್ಲೀಷ್ ಭಾಷೆಯನ್ನು ಬಳಸಲಾಗುತ್ತದೆ. ಇನ್ನು ಅಂತರಾಷ್ಟ್ರೀಯ ವಿಮಾನಗಳಲ್ಲಿ ಇಂಗ್ಲೀಷ್ ಭಾಷೆ ಬಳಸಿದರೆ, ಡೊಮೆಸ್ಟಿಕ್ ವಿಮಾನಗಳಲ್ಲಿ ಇಂಗ್ಲೀಷ್ ಜೊತೆ ಹಿಂದಿ ಭಾಷೆಯನ್ನು ಬಳಸುತ್ತಾರೆ. ಆದರೆ ಪ್ರಾದೇಶಿಕ ಭಾಷೆಯನ್ನು ಬಳಸೋದು ವಿರಳವಾಗಿದ್ದು ತುಳು ಭಾಷೆಯನ್ನು ಬಳಸಿದ್ದು ಈಗ ತುಳುವರಿಗೆ ಹೆಮ್ಮ ಪಡುವ ವಿಚಾರವಾಗಿದೆ. ಇನ್ನು ಪೈಲಟ್ ತುಳು ಜೊತೆ ಇಂಗ್ಲೀಷ್ ಭಾಷೆಯಲ್ಲಿ ಕೂಡ ಅನೌನ್ಸ್ಮೆಂಟ್ ಮಾಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…