ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ಶುಭಾಶಯ ಕೋರಿದ್ದಾರೆ.
ಮಂಗಳೂರು: ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸಿದ್ರೆ ಅಲ್ಲಿ ನೀಡುವ ಸೂಚನೆಗಳ ಬಗ್ಗೆ ನಿಮಗೆ ತಿಳಿದೇ ಇರುತ್ತದೆ. ಅಲ್ಲಿ ಒಂದಷ್ಟು ಸಮಾನ್ಯ ವಿಚಾರ ಇರುತ್ತೆ. ವಿಮಾನದಲ್ಲಿನ ಪ್ರಯಾಣ, ನಡವಳಿಕೆಗಳ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ಅಲ್ಲಿ ಹೇಳುತ್ತಾರೆ. ಆದರೆ ಈಗ ಈ ಸೂಚನೆಗಳ ಅನೌನ್ಸ್ಮೆಂಟ್ ತುಳು ಭಾಷಿಕರಲ್ಲಿ ಹೊಸ ಆಸಕ್ತಿ ಮೂಡಿಸಿದೆ. ಅದಕ್ಕೆ ಕಾರಣ ವಿಮಾನದಲ್ಲಿ ಮಾಡಲಾದ ತುಳು ಭಾಷೆಯ ಅನೌನ್ಸ್ಮೆಂಟ್.
ಮಹಾರಾಷ್ಟ್ರದ ಮುಂಬೈ ಇಂಟರ್ ನ್ಯಾಶನಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನದಲ್ಲಿ ತುಳು ಭಾಷೆಯಲ್ಲಿ ಕೂಡ ಸೂಚನೆ ಕೊಡಲಾಗಿದೆ. ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ಶುಭಾಶಯ ಕೋರಿದ್ದಾರೆ.
ವಿಮಾನಗಳಲ್ಲಿ ಇಂತಹ ಸೂಚನೆ ಅಥವಾ ಅನೌನ್ಸ್ಮೆಂಟ್ಗಳನ್ನು ಮಾಡುವ ಸಂದರ್ಭದಲ್ಲಿ ಇಂಗ್ಲೀಷ್ ಭಾಷೆಯನ್ನು ಬಳಸಲಾಗುತ್ತದೆ. ಇನ್ನು ಅಂತರಾಷ್ಟ್ರೀಯ ವಿಮಾನಗಳಲ್ಲಿ ಇಂಗ್ಲೀಷ್ ಭಾಷೆ ಬಳಸಿದರೆ, ಡೊಮೆಸ್ಟಿಕ್ ವಿಮಾನಗಳಲ್ಲಿ ಇಂಗ್ಲೀಷ್ ಜೊತೆ ಹಿಂದಿ ಭಾಷೆಯನ್ನು ಬಳಸುತ್ತಾರೆ. ಆದರೆ ಪ್ರಾದೇಶಿಕ ಭಾಷೆಯನ್ನು ಬಳಸೋದು ವಿರಳವಾಗಿದ್ದು ತುಳು ಭಾಷೆಯನ್ನು ಬಳಸಿದ್ದು ಈಗ ತುಳುವರಿಗೆ ಹೆಮ್ಮ ಪಡುವ ವಿಚಾರವಾಗಿದೆ. ಇನ್ನು ಪೈಲಟ್ ತುಳು ಜೊತೆ ಇಂಗ್ಲೀಷ್ ಭಾಷೆಯಲ್ಲಿ ಕೂಡ ಅನೌನ್ಸ್ಮೆಂಟ್ ಮಾಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…