ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ.
ಸಿಆರ್ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.
ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಾಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ಗೊತ್ತಾಗಿದೆ.
ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.
ವಿದೇಶಗಳಿಂದ ಬರುವ ಹಲವರ ಲಗೇಜ್ ಬ್ಯಾಗ್ ಗಳನ್ನು ಅಕ್ರಮವಾಗಿ ತೆರೆದು ಅದರಲ್ಲಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿ ಬೆಲೆಬಾಳುವ ವಸ್ತುಗಳ ಕಳವು ನಡೆದಿತ್ತು. ಈ ಬಗ್ಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇನ್ನೂ ಕೆಲವರು ಪೊಲೀಸರಿಗೆ ದೂರು ನೀಡುತ್ತಿದ್ದರು.
ಸದ್ಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್ ಗಳಿಂದ ಕಳವು ಮಾಡುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…