Featured

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ – vishwanews24

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ

ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ.

ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಾಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌ ಎನ್ನಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ವಿದೇಶಗಳಿಂದ ಬರುವ ಹಲವರ ಲಗೇಜ್ ಬ್ಯಾಗ್ ಗಳನ್ನು ಅಕ್ರಮವಾಗಿ ತೆರೆದು ಅದರಲ್ಲಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿ ಬೆಲೆಬಾಳುವ ವಸ್ತುಗಳ ಕಳವು ನಡೆದಿತ್ತು‌. ಈ ಬಗ್ಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇನ್ನೂ ಕೆಲವರು ಪೊಲೀಸರಿಗೆ ದೂರು ನೀಡುತ್ತಿದ್ದರು.

ಸದ್ಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್ ಗಳಿಂದ ಕಳವು ಮಾಡುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago