Featured

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ – vishwanews24

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ

ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ.

ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಾಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌ ಎನ್ನಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ವಿದೇಶಗಳಿಂದ ಬರುವ ಹಲವರ ಲಗೇಜ್ ಬ್ಯಾಗ್ ಗಳನ್ನು ಅಕ್ರಮವಾಗಿ ತೆರೆದು ಅದರಲ್ಲಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿ ಬೆಲೆಬಾಳುವ ವಸ್ತುಗಳ ಕಳವು ನಡೆದಿತ್ತು‌. ಈ ಬಗ್ಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇನ್ನೂ ಕೆಲವರು ಪೊಲೀಸರಿಗೆ ದೂರು ನೀಡುತ್ತಿದ್ದರು.

ಸದ್ಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್ ಗಳಿಂದ ಕಳವು ಮಾಡುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

10 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

13 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

13 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

13 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

13 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

14 hours ago