ಮುಂಬೈ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಪ್ರಯತ್ನದ ಸಂದರ್ಭದಲ್ಲಿ ಪತನಗೊಂಡು ಹಲವಾರು ಜನರು ಗಾಯಗೊಂಡಿದ್ದಾರೆ. ಅವರು ಇಂದು ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು.
ವಿಮಾನವು ಧಗಧಗನೆ ಹೊತ್ತಿ ಉರಿದಿದ್ದು, ಸುಟ್ಟು ಕರಕಲಾಗಿದೆ. ವಿಮಾನದಲ್ಲಿದ್ದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ಲ್ಯಾಂಡಿಂಗ್ ಪ್ರಯತ್ನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಬಾರಮತಿಗೆ ಅಜಿತ್ ಪವಾರ್ ತೆರಳುತ್ತಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. 3-4 ಮಂದಿ ವಿಮಾನದಲ್ಲಿ ಇದ್ದರು ಎನ್ನಲಾಗಿದೆ. ಅಜಿತ್ ಪವಾರ್, ಇಬ್ಬರು ಬಾಡಿಗಾರ್ಡ್ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…