ನಾಗ್ಪುರ: 2019 ರ ಐಸಿಸಿ ವಿಶ್ವಕಪ್ ಅನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲ್ಲಲಿದೆ ಎಂದು ಮಹಾರಾಷ್ಟ್ರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ವಿಶ್ವಕಪ್ ಅನ್ನು ಗೆಲ್ಲಲಿದೆ ಎಂದು ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ. ಕೊಹ್ಲಿಯ ಜಾತಕದ ಪ್ರಕಾರ ಸಂಖ್ಯಾಶಾಸ್ತ್ರ, ನಕ್ಷತ್ರ ಮತ್ತು ಗ್ರಹಗಳ ಸ್ಥಾನಗಳನ್ನು ಆಧರಿಸಿ ಜುಲೈ 14ರಂದು ಟೀಂ ಇಂಡಿಯಾ ಗೆಲ್ಲಲಿದೆ ಎಂದು ಬುಂಡೆ ತಿಳಿಸಿದ್ದಾರೆ. ಇಂಗ್ಲೆಂಡ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ವಿಶ್ವಕಪ್ ಫೈನಲ್ ಪಂದ್ಯವನ್ನು ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಗೆಲ್ಲುವ ಪ್ರಬಲ ಅವಕಾಶಗಳು ಇವೆ ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧ ಭಾರತ ಪರದಾಡಬಹುದು. ಕೊಹ್ಲಿ ಹೆಚ್ಚು ರನ್ಗಳನ್ನು ಗಳಿಸುವುದರೊಂದಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ಅಲ್ಲದೆ, ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಪಂದ್ಯಗಳಲ್ಲಿ ಬ್ಯಾಟಿಂಗ್ನಲ್ಲಿ ಮಿಂಚಲಿದ್ದಾರೆ. ಬೌಲರ್ಗಳ ಪೈಕಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಯಜುವೇಂದ್ರ ಚಾಹಲ್ ಹೆಚ್ಚು ವಿಕೆಟ್ಗಳನ್ನು ಪಡೆಯಲಿದ್ದಾರೆ ಎಂದೂ ಬುಂಡೆ ವಿಶ್ವಕಪ್ ಆರಂಭಕ್ಕೂ ಮುನ್ನ ಭವಿಷ್ಯ ನುಡಿದಿದ್ದರು.
ವಿಶ್ವಕಪ್ ಕುರಿತು ಭವಿಷ್ಯ ನುಡಿದಿರುವ ನರೇಂದ್ರ ಬುಂಡೆ, 1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ತಂಡ ವಿಶ್ವಕಪ್ ಗೆಲ್ಲುವಾಗ ಇದ್ದ ಗ್ರಹಗಳ ಸ್ಥಾನಗಳು ಈ ಬಾರಿಯೂ ಬಹುತೇಕ ಹೋಲುತ್ತವೆ. ಭಾರತಕ್ಕೆ ನಂಬರ್ 3 ಲಕ್ಕಿಯಾಗಿದೆ. ಕೊಹ್ಲಿ ಜಾತಕದ ಪ್ರಕಾರ ಸಂಖ್ಯಾಶಾಸ್ತ್ರ, ನಕ್ಷತ್ರ ಮತ್ತು ಗ್ರಹಗಳ ಸ್ಥಾನಗಳನ್ನು ಆಧರಿಸಿ ಜುಲೈ 14 ರಂದು ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…