ನಾಗ್ಪುರ: 2019 ರ ಐಸಿಸಿ ವಿಶ್ವಕಪ್ ಅನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲ್ಲಲಿದೆ ಎಂದು ಮಹಾರಾಷ್ಟ್ರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ವಿಶ್ವಕಪ್ ಅನ್ನು ಗೆಲ್ಲಲಿದೆ ಎಂದು ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ. ಕೊಹ್ಲಿಯ ಜಾತಕದ ಪ್ರಕಾರ ಸಂಖ್ಯಾಶಾಸ್ತ್ರ, ನಕ್ಷತ್ರ ಮತ್ತು ಗ್ರಹಗಳ ಸ್ಥಾನಗಳನ್ನು ಆಧರಿಸಿ ಜುಲೈ 14ರಂದು ಟೀಂ ಇಂಡಿಯಾ ಗೆಲ್ಲಲಿದೆ ಎಂದು ಬುಂಡೆ ತಿಳಿಸಿದ್ದಾರೆ. ಇಂಗ್ಲೆಂಡ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ವಿಶ್ವಕಪ್ ಫೈನಲ್ ಪಂದ್ಯವನ್ನು ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಗೆಲ್ಲುವ ಪ್ರಬಲ ಅವಕಾಶಗಳು ಇವೆ ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧ ಭಾರತ ಪರದಾಡಬಹುದು. ಕೊಹ್ಲಿ ಹೆಚ್ಚು ರನ್ಗಳನ್ನು ಗಳಿಸುವುದರೊಂದಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ಅಲ್ಲದೆ, ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಪಂದ್ಯಗಳಲ್ಲಿ ಬ್ಯಾಟಿಂಗ್ನಲ್ಲಿ ಮಿಂಚಲಿದ್ದಾರೆ. ಬೌಲರ್ಗಳ ಪೈಕಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಯಜುವೇಂದ್ರ ಚಾಹಲ್ ಹೆಚ್ಚು ವಿಕೆಟ್ಗಳನ್ನು ಪಡೆಯಲಿದ್ದಾರೆ ಎಂದೂ ಬುಂಡೆ ವಿಶ್ವಕಪ್ ಆರಂಭಕ್ಕೂ ಮುನ್ನ ಭವಿಷ್ಯ ನುಡಿದಿದ್ದರು.
ವಿಶ್ವಕಪ್ ಕುರಿತು ಭವಿಷ್ಯ ನುಡಿದಿರುವ ನರೇಂದ್ರ ಬುಂಡೆ, 1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ತಂಡ ವಿಶ್ವಕಪ್ ಗೆಲ್ಲುವಾಗ ಇದ್ದ ಗ್ರಹಗಳ ಸ್ಥಾನಗಳು ಈ ಬಾರಿಯೂ ಬಹುತೇಕ ಹೋಲುತ್ತವೆ. ಭಾರತಕ್ಕೆ ನಂಬರ್ 3 ಲಕ್ಕಿಯಾಗಿದೆ. ಕೊಹ್ಲಿ ಜಾತಕದ ಪ್ರಕಾರ ಸಂಖ್ಯಾಶಾಸ್ತ್ರ, ನಕ್ಷತ್ರ ಮತ್ತು ಗ್ರಹಗಳ ಸ್ಥಾನಗಳನ್ನು ಆಧರಿಸಿ ಜುಲೈ 14 ರಂದು ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂದು ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…