Featured

ವಿಲೀನಗೊಳ್ಳಲಿದೆ ಈ ಮೂರು ಬ್ಯಾಂಕುಗಳು

ನವದೆಹಲಿ: ಸಾರ್ವಜನಿಕ ಸ್ವಾಮ್ಯದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಿಲೀನಗೊಳ್ಳುವ ಮೂಲಕ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್ ಆಗಿ ಹೊರಹೊಮ್ಮಲಿದೆ.

ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆಯನ್ನು ಬಜೆಟ್ ನಲ್ಲಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಗಳ ವಿಲೀನವಾಗಲಿದೆ. ಇರುವ ಸಿಬ್ಬಂದಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.

ಪ್ರಸ್ತುತ ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಖಾಸಗಿ ಬ್ಯಾಂಕ್ ಗಳ ಪೈಕಿ ಎಚ್‍ಡಿಎಫ್‍ಸಿ ಮತ್ತು ಐಸಿಐಸಿಐ ಬ್ಯಾಂಕ್ ಮುಂಚೂಣಿಯಲ್ಲಿದೆ.

ವಿಲೀನ ಯಾಕೆ?
ವಿಶ್ವದ ಟಾಪ್ 50 ಪಟ್ಟಿಯಲ್ಲಿ ಭಾರತದ ಯಾವೊಂದು ಬ್ಯಾಂಕ್ ಸ್ಥಾನ ಪಡೆದಿಲ್ಲ. ಹೀಗಾಗಿ ಸಾರ್ವಜನಿಕ ವಲಯದಲ್ಲಿರುವ 21 ಬ್ಯಾಂಕ್ ಗಳನ್ನು 12ಕ್ಕೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಡೆಯಲಿದೆ.

ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್‍ಬಿಎಂ), ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಹಾಗೂ ಜೈಪುರ್ (ಎಎಸ್‍ಬಿಜೆ), ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್(ಎಸ್‍ಟಿ), ಸ್ಟೇಟ್ ಬ್ಯಾಂಕ್ ಪಟಿಯಾಲಾ (ಎಎಸ್‍ಬಿಪಿ), ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ (ಎಎಸ್‍ಬಿಎಚ್)ಹಾಗೂ ಭಾರತೀಯ ಮಹಿಳಾ ಬ್ಯಾಂಕ್ (ಬಿಬಿಎಂ)ಗಳು ಎಸ್‍ಬಿಐ ಜೊತೆ 2017ರ ಏಪ್ರಿಲ್ 1ರಂದು ವಿಲೀನವಾಗಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ 5 ಬ್ಯಾಂಕ್ ಗಳು ವಿಲೀನ ಪ್ರಕ್ರಿಯೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮತ್ತಷ್ಟು ಬ್ಯಾಂಕ್ ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಈ ಹಿಂದೆಯೇ ವರದಿಯಾಗಿತ್ತು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

11 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

12 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

12 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

12 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

12 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

12 hours ago