ತಮಿಳುನಾಡು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿಳಾಸ ಕೇಳುವ ನೆಪದಲ್ಲಿ ಮೇಕೆ ಮೇಯಿಸುತ್ತಿದ್ದ ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಶಾಂತ್(20) ಮತ್ತು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ.
ಹೊಲದಲ್ಲಿ ವೃದ್ಧೆಯೊಬ್ಬರು ಮೇಕೆಗಳನ್ನು ಮೇಯಿಸುತ್ತಿದ್ದು, ಆಗ ಓರ್ವ ಯುವತಿ ಮತ್ತು ಯುವಕ ಸ್ಕೂಟರ್ನಲ್ಲಿ ಅಲ್ಲಿಗೆ ಬಂದು ವಿಳಾಸ ಕೇಳುವ ನೆಪದಲ್ಲಿ ಈಕೆಯನ್ನು ಮಾತನಾಡಿಸಿದ್ದಾರೆ. ಯುವತಿ ಸ್ಕೂಟರ್ ನಡೆಸುತ್ತಿದ್ದರೆ, ಹಿಂಬದಿ ಕುಳಿತಿದ್ದ ಯುವಕ ಏಕಾಏಕಿ ಕಾಳಿಯಮ್ಮಳ್ ಬಳಿ ಇದ್ದ 5.5 ಪವನ್ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.
ಇನ್ನು ಈ ಬಗ್ಗೆ ದಾಖಲಾದ ದೂರಿನನ್ವಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಅಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಸಿಸಿಟಿವಿಯಲ್ಲಿ ಸ್ಕೂಟರ್ನ ನಂಬರ್ ದಾಖಲಾಗಿತ್ತು. ಬಳಿಕ ಪೊಲೀಸರು ಪ್ರಶಾಂತ್ ಹಾಗೂ ತೇಜಸ್ವಿನಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಇಬ್ಬರೂ ತಪ್ಪೊಪ್ಪಿಕೊಂಡಿದ್ದಾರೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…