ನವದೆಹಲಿ: ಪ್ರವಾದಿ ಮಹಮ್ಮದ್ರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದ ಜನರ ಕ್ಷಮೆಯಾಚಿಸಿ ಎಂದು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ವಿವಾದಾತ್ಮಹ ಹೇಳಿಕೆ ನೀಡಿ ದೇಶದಲ್ಲಿ ಹಲವಾರು ಹಿಂಸಾಚಾರಕ್ಕೆ ಕಾರಣವಾದ ನೂಪುರ್ ಶರ್ಮಾ ಅವರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಉದಯಪುರದಲ್ಲಿ ನಡೆದ ಘಟನೆಗೆ ನೀವೇ ಕಾರಣ. ವಿವಾದಾತ್ಮಕ ಹೇಳಿಕೆ ಕುರಿತು ಇಡೀ ದೇಶದ ಜನರ ಕ್ಷಮೆ ಯಾಚಿಸಿ ಎಂದು ಸೂಚನೆ ನೀಡಿದೆ.
ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ವಿರುದ್ದ ದೆಹಲಿ, ಕೋಲ್ಕತ್ತಾ, ಬಿಹಾರ, ಪುಣೆ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ತಮ್ಮ ವಿರುದ್ದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ದೂರುಗಳನ್ನು ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಜೀವಕ್ಕೆ ಅಪಾಯವಿದೆ. ಹೀಗಾಗಿ ದೆಹಲಿಗೆ ಎಲ್ಲಾ ಪ್ರಕರಣಗಳನ್ನು ವರ್ಗಾವಣೆ ಮಾಡಬೇಕು ಎಂಬುದಾಗಿ ಕೋರಿದ್ದಾರೆ ಎನ್ನಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…