Featured

ವಿವಾದಾತ್ಮಕ ಹೇಳಿಕೆ: ಯಕ್ಷಗಾನ ಕಲಾವಿದರ ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ   – vishwanews24

ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ , ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ  : ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ, ಮಾಡುವ ಉದ್ದೇಶ ಕೂಡ ನನ್ನದಾಗಿರಲಿಲ್ಲ, ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದ ವ್ಯಕ್ತಪಡಿಸಿದ್ದಾರೆ.

ತಮ್ಮ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿ ವಿವಾದವಾದ ಬೆನ್ನಲ್ಲೇ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

ಯಕ್ಷಗಾನ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿ ಅನೇಕರ ಆಕ್ರೋಶಕ್ಕೆ ಗುರಿಯಾಗಿತ್ತು. ಪುರುಷೋತ್ತಮ ಬಿಳಿ ಮಲೆಯವರು ಬುಧವಾರ(ನ19) ಮಾಧ್ಯಮಗಳ ಎದುರು ಕ್ಷಮೆ ಯಾಚನೆ ಮಾಡಿದ್ದಾರೆ. ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾದಲ್ಲಿ ಕ್ಷಮೆ ಯಾಚನೆ ಮಾಡುತ್ತೇನೆ ಎಂದಿದ್ದಾರೆ.
“ಎಲ್ಲರೂ ಅಲ್ಲ ಕೆಲವು ಕಲಾವಿದರು ಸಲಿಂಗಿಗಳು ಹೌದು. ಆ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು.ಹಿಂದೆ ನವೆಂಬರ್ ನಲ್ಲಿ ಆರಂಭವಾದ ತಿರುಗಾಟ ಮೇ ಕೊನೆಯಲ್ಲಿ ಮುಕ್ತಾಯವಾಗುತ್ತಿತ್ತು. ಕಲಾವಿದರಿಗೆ ಮನೆಯ ಸಂಪರ್ಕ ಕಷ್ಟವಾಗುತ್ತಿತ್ತು. ಯಕ್ಷಗಾನ ಕಲೆ ಈಗ ಹಿಂದಿನಂತಿಲ್ಲ, ಕಲಾವಿದರಿಗೆ ಅನೇಕ ಸೌಲಭ್ಯಗಳಿವೆ. ಅನೇಕರು ಮಧ್ಯ ರಾತ್ರಿ ಪ್ರದರ್ಶನ ಮುಗಿಸಿ ಕಾರುಗಳಲ್ಲಿ ಮನೆಗೆ ತಲುಪುತ್ತಾರೆ. ಹಿಂದೆ ಆ ಸೌಕರ್ಯಗಳಿರಲಿಲ್ಲ. ಕಲಾವಿದರ ಕಷ್ಟಗಳ ಕುರಿತು ನಾನು ಮಾತನಾಡಿದ್ದೆ.ಯಕ್ಷಗಾನ ಕಲಾವಿದರಿಗೆ ನನ್ನ ಹೇಳಿಕೆ ನೋವು ತಂದುಕೊಟ್ಟಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದಿದ್ದಾರೆ.

ಮೈಸೂರು ವಿವಿ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಬಿಳಿಮಲೆ “ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳಾಗಿದ್ದು ಸ್ತ್ರೀ ಪಾತ್ರಧಾರಿಗಳ ಮೇಲೆ ಇತರರಿಗೆ ಮೋಹವಿರುತ್ತಿತ್ತು.ಯಕ್ಷಗಾನ ಕಲಾವಿದರು ಮೇಳಕ್ಕೆಂದು ಲಾರಿ ಏರಿ ಹೊರಟರೆ ಆರೇಳು ತಿಂಗಳು ತಿರುಗಾಟದಲ್ಲೇ ಇದ್ದುದರಿಂದ, ಅವರಲ್ಲಿನ ಕಾಮ ಭಾವನೆ ಸಲಿಂಗಕ್ಕೆ ದೂಡುತ್ತಿತ್ತು. ಅಲ್ಲಿ ಅಂತಹ ಅನಿವಾರ್ಯತೆಯೂ ಇರುತ್ತಿತ್ತು ಎಂದಿದ್ದರು.

“ಸತ್ಯವನ್ನು ಹೇಳಲು ಹಿಂಜರಿಯಬಾರದು. ಸಾಮಾನ್ಯವಾಗಿ ಕಲಾವಿದರಿಗೆ ಯಾರು ಹೆಣ್ಣು ಕೊಡುವುದಿಲ್ಲ. ಕಲಾವಿದರು ಮೇಳಕ್ಕೆಂದು ಹೋದರೆ ವಾಪಸ್ ಬರುವುದು ಆರೇಳು ತಿಂಗಳು. ಮನೆಯವರನ್ನು ಬಿಟ್ಟು ಇರಬೇಕಿತ್ತು. ಈ ಕಲಾವಿದರ ಪೈಕಿ ಸ್ತ್ರೀ ವೇಷಧಾರಿಗಳ ಮೇಲೆ ಪ್ರೀತಿ, ಮೋಹ ಏರ್ಪಡುತ್ತಿತ್ತು. ಒಂದು ವೇಳೆ ಸ್ತ್ರೀ ವೇಷದ ಕಲಾವಿದ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು” ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago