Featured

ವಿವಾದಾತ್ಮಕ ಹೇಳಿಕೆ: ಯಕ್ಷಗಾನ ಕಲಾವಿದರ ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ   – vishwanews24

ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ , ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ  : ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ, ಮಾಡುವ ಉದ್ದೇಶ ಕೂಡ ನನ್ನದಾಗಿರಲಿಲ್ಲ, ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದ ವ್ಯಕ್ತಪಡಿಸಿದ್ದಾರೆ.

ತಮ್ಮ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿ ವಿವಾದವಾದ ಬೆನ್ನಲ್ಲೇ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

ಯಕ್ಷಗಾನ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿ ಅನೇಕರ ಆಕ್ರೋಶಕ್ಕೆ ಗುರಿಯಾಗಿತ್ತು. ಪುರುಷೋತ್ತಮ ಬಿಳಿ ಮಲೆಯವರು ಬುಧವಾರ(ನ19) ಮಾಧ್ಯಮಗಳ ಎದುರು ಕ್ಷಮೆ ಯಾಚನೆ ಮಾಡಿದ್ದಾರೆ. ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾದಲ್ಲಿ ಕ್ಷಮೆ ಯಾಚನೆ ಮಾಡುತ್ತೇನೆ ಎಂದಿದ್ದಾರೆ.
“ಎಲ್ಲರೂ ಅಲ್ಲ ಕೆಲವು ಕಲಾವಿದರು ಸಲಿಂಗಿಗಳು ಹೌದು. ಆ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು.ಹಿಂದೆ ನವೆಂಬರ್ ನಲ್ಲಿ ಆರಂಭವಾದ ತಿರುಗಾಟ ಮೇ ಕೊನೆಯಲ್ಲಿ ಮುಕ್ತಾಯವಾಗುತ್ತಿತ್ತು. ಕಲಾವಿದರಿಗೆ ಮನೆಯ ಸಂಪರ್ಕ ಕಷ್ಟವಾಗುತ್ತಿತ್ತು. ಯಕ್ಷಗಾನ ಕಲೆ ಈಗ ಹಿಂದಿನಂತಿಲ್ಲ, ಕಲಾವಿದರಿಗೆ ಅನೇಕ ಸೌಲಭ್ಯಗಳಿವೆ. ಅನೇಕರು ಮಧ್ಯ ರಾತ್ರಿ ಪ್ರದರ್ಶನ ಮುಗಿಸಿ ಕಾರುಗಳಲ್ಲಿ ಮನೆಗೆ ತಲುಪುತ್ತಾರೆ. ಹಿಂದೆ ಆ ಸೌಕರ್ಯಗಳಿರಲಿಲ್ಲ. ಕಲಾವಿದರ ಕಷ್ಟಗಳ ಕುರಿತು ನಾನು ಮಾತನಾಡಿದ್ದೆ.ಯಕ್ಷಗಾನ ಕಲಾವಿದರಿಗೆ ನನ್ನ ಹೇಳಿಕೆ ನೋವು ತಂದುಕೊಟ್ಟಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದಿದ್ದಾರೆ.

ಮೈಸೂರು ವಿವಿ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಬಿಳಿಮಲೆ “ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳಾಗಿದ್ದು ಸ್ತ್ರೀ ಪಾತ್ರಧಾರಿಗಳ ಮೇಲೆ ಇತರರಿಗೆ ಮೋಹವಿರುತ್ತಿತ್ತು.ಯಕ್ಷಗಾನ ಕಲಾವಿದರು ಮೇಳಕ್ಕೆಂದು ಲಾರಿ ಏರಿ ಹೊರಟರೆ ಆರೇಳು ತಿಂಗಳು ತಿರುಗಾಟದಲ್ಲೇ ಇದ್ದುದರಿಂದ, ಅವರಲ್ಲಿನ ಕಾಮ ಭಾವನೆ ಸಲಿಂಗಕ್ಕೆ ದೂಡುತ್ತಿತ್ತು. ಅಲ್ಲಿ ಅಂತಹ ಅನಿವಾರ್ಯತೆಯೂ ಇರುತ್ತಿತ್ತು ಎಂದಿದ್ದರು.

“ಸತ್ಯವನ್ನು ಹೇಳಲು ಹಿಂಜರಿಯಬಾರದು. ಸಾಮಾನ್ಯವಾಗಿ ಕಲಾವಿದರಿಗೆ ಯಾರು ಹೆಣ್ಣು ಕೊಡುವುದಿಲ್ಲ. ಕಲಾವಿದರು ಮೇಳಕ್ಕೆಂದು ಹೋದರೆ ವಾಪಸ್ ಬರುವುದು ಆರೇಳು ತಿಂಗಳು. ಮನೆಯವರನ್ನು ಬಿಟ್ಟು ಇರಬೇಕಿತ್ತು. ಈ ಕಲಾವಿದರ ಪೈಕಿ ಸ್ತ್ರೀ ವೇಷಧಾರಿಗಳ ಮೇಲೆ ಪ್ರೀತಿ, ಮೋಹ ಏರ್ಪಡುತ್ತಿತ್ತು. ಒಂದು ವೇಳೆ ಸ್ತ್ರೀ ವೇಷದ ಕಲಾವಿದ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು” ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

11 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

13 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

13 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

14 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

14 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

14 hours ago