ವಿಜಯಪುರ: ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರರಾದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸುರಪುರದ ನಾಯಕರು, ಹಲಗಲಿ ಬೇಡರ ಫೋಟೊದೊಂದಿಗೆ ರಥಯಾತ್ರೆ ಮಾಡಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಬಿಜೆಪಿಗೆ ಸಲಹೆ ನೀಡಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಬ್ರಿಟಿಷ್ ರಿಗೆ ತಪ್ಪೊಪ್ಪಿಗೆ ಪತ್ರ ಬರೆದ ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಮಾಡುವುದಕ್ಕಿಂತ ನಮ್ಮ ನಾಡಿನ ವಿವಾದ ರಹಿತ, ಬ್ರಿಟಿಷ್ ರ ಕ್ಷಮಾಪಣೆ ಯಾಚಿಸದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ರಥಯಾತ್ರೆ ಮಾಡಿದರೆ ನಾವೂ ಪಾಲ್ಗೊಳ್ಳುತ್ತೇವೆ ಎಂದರು.
ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಹಲಗಲಿ ಬೇಡರು, ಸುರಪುರ ನಾಯಕರು ಬಿಜೆಪಿಯವರಿಗೆ ಬೇಡವಾದರೇ? ಇವರ ಗೌರವ ಇದ್ದರೇ ಇಂದೇ ಅವರ ರಥಯಾತ್ರೆಯಲ್ಲಿರುವ ಸಾವರ್ಕರ್ ಫೋಟೊ ಬದಲಿಸಲಿ ಎಂದು ಸವಾಲು ಹಾಕಿದರು.
ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಬಿಜೆಪಿ ಸಾವರ್ಕರ್ ಹೆಸರು ಬಳಸುತ್ತಿದೆ ..
ಗಣೇಶೋತ್ಸವದಲ್ಲಿ ವಿವಾದಿತ ಸಾವರ್ಕರ್ ಫೋಟೊ ಇಡುವಂತೆ ಬಿಜೆಪಿಯವರು ಕರೆ ನೀಡುವ ಬದಲು ನಮ್ಮವರೇ ಆದ ರಾಯಣ್ಣ, ಚನ್ನಮ್ಮನ ಫೋಟೊ ಇಟ್ಟು ಗೌರವ ಸಲ್ಲಿಸಿ. ವಿವಾದಿತ ವ್ಯಕ್ತಿಯನ್ನು ವೈಭವೀಕರಿಸುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.
ಸಾವರ್ಕರ್ ರಥಯಾತ್ರೆ ಬದಲಿಗೆ ಕಾಂಗ್ರೆಸ್ ವತಿಯಿಂದ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರಿಗೆ ಸೂಕ್ತ ಗೌರವ ನೀಡುವ ಕಾರ್ಯಕ್ರಮ ಶೀಘ್ರ ಹಾಕಿಕೊಳ್ಳಲಾಗುವುದು ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…