Featured

ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ರಾಯಣ್ಣ ಕಿತ್ತೂರು ಚೆನ್ನಮ್ಮ ರಥಯಾತ್ರೆ ಮಾಡಲಿ : ಎಂ.ಬಿ. ಪಾಟೀಲ

ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ರಾಯಣ್ಣ ಕಿತ್ತೂರು ಚೆನ್ನಮ್ಮ ರಥಯಾತ್ರೆ ಮಾಡಲಿ : ಎಂ.ಬಿ. ಪಾಟೀಲ

ವಿಜಯಪುರ: ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರರಾದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸುರಪುರದ ನಾಯಕರು, ಹಲಗಲಿ ಬೇಡರ ಫೋಟೊದೊಂದಿಗೆ ರಥಯಾತ್ರೆ ಮಾಡಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಬಿಜೆಪಿಗೆ ಸಲಹೆ ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಬ್ರಿಟಿಷ್ ರಿಗೆ ತಪ್ಪೊಪ್ಪಿಗೆ ಪತ್ರ ಬರೆದ ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಮಾಡುವುದಕ್ಕಿಂತ ನಮ್ಮ ನಾಡಿನ ವಿವಾದ ರಹಿತ, ಬ್ರಿಟಿಷ್ ರ ಕ್ಷಮಾಪಣೆ ಯಾಚಿಸದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ರಥಯಾತ್ರೆ ಮಾಡಿದರೆ ನಾವೂ ಪಾಲ್ಗೊಳ್ಳುತ್ತೇವೆ ಎಂದರು.

ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಹಲಗಲಿ ಬೇಡರು, ಸುರಪುರ ನಾಯಕರು ಬಿಜೆಪಿಯವರಿಗೆ ಬೇಡವಾದರೇ? ಇವರ ಗೌರವ ಇದ್ದರೇ ಇಂದೇ ಅವರ ರಥಯಾತ್ರೆಯಲ್ಲಿರುವ ಸಾವರ್ಕರ್ ಫೋಟೊ ಬದಲಿಸಲಿ ಎಂದು ಸವಾಲು ಹಾಕಿದರು.

ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಬಿಜೆಪಿ ಸಾವರ್ಕರ್ ಹೆಸರು ಬಳಸುತ್ತಿದೆ ..

ಗಣೇಶೋತ್ಸವದಲ್ಲಿ ವಿವಾದಿತ ಸಾವರ್ಕರ್ ಫೋಟೊ ಇಡುವಂತೆ ಬಿಜೆಪಿಯವರು ಕರೆ ನೀಡುವ ಬದಲು ನಮ್ಮವರೇ ಆದ ರಾಯಣ್ಣ, ಚನ್ನಮ್ಮನ ಫೋಟೊ ಇಟ್ಟು ಗೌರವ ಸಲ್ಲಿಸಿ. ವಿವಾದಿತ ವ್ಯಕ್ತಿಯನ್ನು ವೈಭವೀಕರಿಸುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.

ಸಾವರ್ಕರ್ ರಥಯಾತ್ರೆ ಬದಲಿಗೆ ಕಾಂಗ್ರೆಸ್ ವತಿಯಿಂದ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರಿಗೆ ಸೂಕ್ತ ಗೌರವ ನೀಡುವ ಕಾರ್ಯಕ್ರಮ ಶೀಘ್ರ ಹಾಕಿಕೊಳ್ಳಲಾಗುವುದು ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago