ವಿಜಯಪುರ: ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರರಾದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸುರಪುರದ ನಾಯಕರು, ಹಲಗಲಿ ಬೇಡರ ಫೋಟೊದೊಂದಿಗೆ ರಥಯಾತ್ರೆ ಮಾಡಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಬಿಜೆಪಿಗೆ ಸಲಹೆ ನೀಡಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಬ್ರಿಟಿಷ್ ರಿಗೆ ತಪ್ಪೊಪ್ಪಿಗೆ ಪತ್ರ ಬರೆದ ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಮಾಡುವುದಕ್ಕಿಂತ ನಮ್ಮ ನಾಡಿನ ವಿವಾದ ರಹಿತ, ಬ್ರಿಟಿಷ್ ರ ಕ್ಷಮಾಪಣೆ ಯಾಚಿಸದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ರಥಯಾತ್ರೆ ಮಾಡಿದರೆ ನಾವೂ ಪಾಲ್ಗೊಳ್ಳುತ್ತೇವೆ ಎಂದರು.
ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಹಲಗಲಿ ಬೇಡರು, ಸುರಪುರ ನಾಯಕರು ಬಿಜೆಪಿಯವರಿಗೆ ಬೇಡವಾದರೇ? ಇವರ ಗೌರವ ಇದ್ದರೇ ಇಂದೇ ಅವರ ರಥಯಾತ್ರೆಯಲ್ಲಿರುವ ಸಾವರ್ಕರ್ ಫೋಟೊ ಬದಲಿಸಲಿ ಎಂದು ಸವಾಲು ಹಾಕಿದರು.
ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಬಿಜೆಪಿ ಸಾವರ್ಕರ್ ಹೆಸರು ಬಳಸುತ್ತಿದೆ ..
ಗಣೇಶೋತ್ಸವದಲ್ಲಿ ವಿವಾದಿತ ಸಾವರ್ಕರ್ ಫೋಟೊ ಇಡುವಂತೆ ಬಿಜೆಪಿಯವರು ಕರೆ ನೀಡುವ ಬದಲು ನಮ್ಮವರೇ ಆದ ರಾಯಣ್ಣ, ಚನ್ನಮ್ಮನ ಫೋಟೊ ಇಟ್ಟು ಗೌರವ ಸಲ್ಲಿಸಿ. ವಿವಾದಿತ ವ್ಯಕ್ತಿಯನ್ನು ವೈಭವೀಕರಿಸುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.
ಸಾವರ್ಕರ್ ರಥಯಾತ್ರೆ ಬದಲಿಗೆ ಕಾಂಗ್ರೆಸ್ ವತಿಯಿಂದ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರಿಗೆ ಸೂಕ್ತ ಗೌರವ ನೀಡುವ ಕಾರ್ಯಕ್ರಮ ಶೀಘ್ರ ಹಾಕಿಕೊಳ್ಳಲಾಗುವುದು ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…