ಬೆಂಗಳೂರು: ಪ್ರಿಯಕರನೊಬ್ಬ ಹಣಕ್ಕಾಗಿ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಗಂಗಾ ( 34) ಕೊಲೆಯಾದ ಯುವತಿ.
ಕೊಲೆ ಆರೋಪಿ ಶ್ಯಾಮು (27) ದಾಂಡೇಲಿ ಮೂಲದವನಾಗಗಿದ್ದು, ಯೋಗ ಶಿಕ್ಷಕ ವೃತ್ತಿ ಮಾಡುತ್ತಿದ್ದ. ಆತನ ತರಬೇತಿ ಕೇಂದ್ರದಲ್ಲಿ ಗಂಗಾ ಯೋಗ ಕಲಿಯುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುವಾಗಿತ್ತು. ಇತ್ತ ಶ್ಯಾಮ್ನಿಂದ ಯೋಗ ತರಬೇತಿ ಪಡೆದಿದ್ದ ಗಂಗಾ ಪ್ರತ್ಯೇಕವಾಗಿ ಕ್ಲಾಸ್ ಮಾಡುತ್ತಿದ್ದಳು. ಅದಕ್ಕಾಗಿ ಶ್ಯಾಮ್ನಿಂದ ಗಂಗಾ ಒಂದು ಲಕ್ಷ ಹಣ ಪಡೆದಿದ್ದಳು.
ಇಬ್ಬರ ಮನೆಯಲ್ಲೂ ಒಪ್ಪಿಸಿ ಫೆಬ್ರವರಿಯಲ್ಲಿ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು. ಪ್ರೇಯಸಿಗಾಗಿ ಯಲಹಂಕ ನ್ಯೂ ಟೌನ್ನಲ್ಲಿ ಶ್ಯಾಮ್ ರೂಮ್ ಮಾಡಿಕೊಟ್ಟಿದ್ದ. ಬುಧವಾರ ರಾತ್ರಿ ಮನೆಗೆ ಬಂದಾಗ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಇದೇ ವೇಳೆ ಕೋಪಗೊಂಡ ಶ್ಯಾಮ್, ಗಂಗಾ ತಲೆಯನ್ನು ಗೋಡೆಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…