ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ ಮೂಲದ ಮಹಿಳೆ ಹಾಗೂ ಮೃತ ಯುವಕ ಒಂದೇ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದಾಗ ಇನ್ಸ್ಟಾಗ್ರಾಮ್ ಮುಖಾಂತರ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದರು.
ಇದನ್ನೂ ಓದಿ:
ಮಹಿಳೆಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದಳು. ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿ ಎಂದು ನಂಬಿಸಿ, ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು. ತಿಂಗಳಿಗೆ 3 ಸಾವಿರ ರೂ.ಯಂತೆ ಬಾಡಿಗೆ ಕೊಟ್ಟು ಜೊತೆಯಲ್ಲಿದ್ದರು.
ಇತ್ತೀಚಿಗೆ ಮಹಿಳೆ ನನ್ನ ಮೆಂಟೇನೆನ್ಸ್ ಆಗಲ್ಲ ಬಿಟ್ಟು ಬಿಡು ಎಂದು ಯುವಕನಿಗೆ ಕಿರುಕುಳ ನೀಡಿದ್ದಳು. ಇದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಯುವಕನ ಸಾವಿಗೆ ಮಹಿಳೆಯೇ ಕಾರಣ ಎಂದು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ:
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…