ಬೆಂಗಳೂರು, : ಜೂನ್ 28ರ ಸೋಮವಾರದಿಂದ ವಿವಾಹ ಸಮಾರಂಭ ನಡೆಸಲು ಷರತ್ತುಬದ್ದ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 40 ಮಂದಿಗೆ ಭಾಗವಹಿಸಲು ಸೂಚನೆ ನೀಡಲಾಗಿದೆ.
ಜೂನ್ 25ರ ಶುಕ್ರವಾರದಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ, ವಿವಾಹ ಸಮಾರಂಭಗಳಿಗೆ ಷರತ್ತುಬದ್ಧ ಸನುಮತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ಉಲ್ಲೇಖಿಸಿದ್ದು, ಅದರ ಪ್ರಕಾರ ಜೂನ್ 28ರಿಂದ ವಿವಾಹ ಕಾರ್ಯಕ್ರಮಗಳಳಿಗೆ ಅನುಮತಿ ನೀಡಲಾಗಿದೆ.
ಸ್ಥಳೀಯ ಆಡಳಿತದಿಂದ ವಿವಾಹ ನಡೆಸಲು ಪೂರ್ವಾನುಮತಿ ಪಡೆದುಕೊಳ್ಳಬೇಕು. ಇದರೊಂದಿಗೆ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸ್ ಹೊಂದಿರಬೇಕು. ರೆಸಾರ್ಟ್ ಸೇರಿದಂತೆ ಪಾರ್ಟಿ ಹಾಲ್, ಕಲ್ಯಾಣ ಮಂಟಪ ಹಾಗೂ ಹೋಟೆಲ್ನಲ್ಲಿ ವಿವಾಹ ಸಮಾರಂಭಕ್ಕೆ ಅನುಮತಿ ನೀಡಿದ್ದು, ಕೇವಲ 40 ಮಂದಿಗೆ ಪಾಲ್ಗೊಳಲು ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರವು ಜೂನ್ 21ರ ಬಳಿಕ ಲಾಕ್ಡೌನ್ ನಿಯಾಮವಳಿಗಳ ಪೈಕಿ ಹಲವು ಸಡಿಲಿಕೆಗಳನ್ನು ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದೆ
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…